ಸಂಗ್ರಹ ಚಿತ್ರ 
ರಾಜ್ಯ

ಉಡುಪಿ: ಮೊಬೈಲ್ ಗೇಮ್ ಆಡಬೇಡವೆಂದು ಬುದ್ದಿ ಹೇಳಿದ್ದಕ್ಕೆ 16 ವರ್ಷದ ಬಾಲಕಿ ಆತ್ಮಹತ್ಯೆ!

ಮೊಬೈಲ್ ಗೇಮಿಂಗ್ ಚಟ ಯುವಕ/ಯುವತಿಯರ ಜೀವನವನ್ನು ಹೇಗೆ ಆಕ್ರಮಿಸಿಕೊಂಡಿದೆ ಎಂಬುದನ್ನು ಎತ್ತಿ ತೋರಿಸುವ ಘಟನೆಯೊಂದು ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. 

ಕಾಪು: ಮೊಬೈಲ್ ಗೇಮಿಂಗ್ ಚಟ ಯುವಕ/ಯುವತಿಯರರ ಜೀವನವನ್ನು ಹೇಗೆ ಆಕ್ರಮಿಸಿಕೊಂಡಿದೆ ಎಂಬುದನ್ನು ಎತ್ತಿ ತೋರಿಸುವ ಘಟನೆಯೊಂದು ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. 16 ವರ್ಷದ ಬಾಲಕಿಯೊಬ್ಬಳು ಆಕೆ ಮೊಬೈಲ್ ಫೋನ್‌ನಲ್ಲಿ ವಿಡಿಯೋ ಗೇಮ್‌ಗಳನ್ನು ಆಡಿದ್ದಕ್ಕಾಗಿ ಪೋಷಕರು ನಿಂದಿಸಿದರೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೇ  15 ರ ಸಂಜೆ ಕಾಪು ತಾಲೂಕಿನ ಮಣಿಪುರ ಗ್ರಾಮದ ಮಣಿಪುರ ಕೋಟೆಯಲ್ಲಿ ನಡೆದಿದೆ.

ಮೃತಳನ್ನು ಜುಬೇರಾ ಹಾಗೂ ಶಬಾನು ಅವರ ಪುತ್ರಿ ಸುಹೀಬತ್ ಅಸ್ಲಮಿಯಾ ಎಂದು ಗುರುತಿಸಲಾಗಿದೆ. ಆಕೆಯ ತಂದೆ ನೀಡಿದ್ದ ದೂರಿನನ್ವಯ ಬಾಲಕಿ ನಿರಂತರವಾಗಿ ಮೊಬೈಲ್ ಫೋನ್‌ನಲ್ಲಿ ಗೇಮ್ ಆಡುವುದರಲ್ಲಿ ತಲ್ಲೀನಳಾಗಿರುತ್ತಿದ್ದಳು. ಹಾಗೆ ಮಾಡಬೇಡ ಎಂದರೂ ಕೇಳುತ್ತಿರಲಿಲ್ಲ. ಮೇ 15 ರ ಸಂಜೆ ಬಾಲಕಿಗೆ ದೂರುದಾರರಾದ ಜುಬೇದಾ ಹಾಗೂ ಆತನ ಪತ್ನಿ  ಮೊಬೈಲ್‌ನಲ್ಲಿ ಆಟವಾಡುವುದನ್ನು ನಿಲ್ಲಿಸುವಂತೆ ಸಲಹೆ ನೀಡಿದರು ಮತ್ತು ಅವಳಿಂದ ಮೊಬೈಲ್ ಅನ್ನು ಕಸಿದುಕೊಂಡಿದ್ದಾರೆ. ಅದಾದ ನಂತರ ಬಾಲಕಿ ಮನೆಯ ಒಂದು ಮೂಲೆಯಲ್ಲಿ ಕುಳಿತಿದ್ದಳು.

ಆಗ ತಾಯಿ ನಮಾಜ್ ಮಾಡಲು ಹೋದರೆ ತಂದೆ ಸ್ನಾನಕ್ಕೆ ತೆರಳಿದ್ದರು. ನಮಾಜ್ ನಂತರ ತಾಯಿ ಆಗಮಿಸಿದಾಗ ಮಗಳು ಅಲ್ಲಿರಲಿಲ್ಲ.

ಅವಳನ್ನು ಹುಡುಕತೊಡಗಿದಾಗ ತಮ್ಮ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ಸರ್ಕಾರಿ ಬಾವಿಯ ಸಮೀಪ ಜನ ಸೇರಿರುವುದನ್ನು ಕಂಡಿದ್ದಾರೆ. ಆಗ ಅವರಿಗೆ ತಮ್ಮ ಮಗಳು ಬಾವಿಗೆ ಹಾರಿ ಪ್ರಾಣ ಕಳೆದುಕೊಳ್ಳಲು ಮುಂದಾಗಿದ್ದಾಳೆ ಎನ್ನುವುದು ಗೊತ್ತಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಸ್ಲಮಿಯಾಳನ್ನು ಬಾವಿಯಿಂದ ಎತ್ತುವಷ್ಟರಲ್ಲೇ ಆಕೆ ಕೊನೆಯುಸಿರೆಳೆದಿದ್ದಳು.

ಘಟನೆ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT