ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕೊಲೆ ಪ್ರಕರಣ ಭೇದಿಸುವಲ್ಲಿ ಪೊಲೀಸರಿಗೆ ಲೋಕೋ ಪೈಲಟ್ ನೆರವು

ಲೋಕೋ ಪೈಲಟ್ ಒಬ್ಬರು ನೀಡಿದ ಮಾಹಿತಿಯೊಂದು ನಗರದ ಪೊಲೀಸರು 24 ಗಂಟೆಗಳಲ್ಲಿ ಕೊಲೆ ಪ್ರಕರಣವೊಂದನ್ನು ಭೇದಿಸಲು ನೆರವಾಗಿದೆ. 

ಬೆಂಗಳೂರು: ಲೋಕೋ ಪೈಲಟ್ ಒಬ್ಬರು ನೀಡಿದ ಮಾಹಿತಿಯೊಂದು ನಗರದ ಪೊಲೀಸರು 24 ಗಂಟೆಗಳಲ್ಲಿ ಕೊಲೆ ಪ್ರಕರಣವೊಂದನ್ನು ಭೇದಿಸಲು ನೆರವಾಗಿದೆ. 

ಮೈಸೂರು-ಕಾಚಿಗೂಡ ಎಕ್ಸ್'ಪ್ರೆಸ್ ರೈಲು ಚಲಿಸುತ್ತಿದ್ದು, ಕಸ್ತೂರಿ ನಗರದ ರೈಲ್ವೇ ಟ್ರ್ಯಾಕ್ ಬಳಿ ಮೃತದೇಹವೊಂದು ಬಿದ್ದಿರುವುದ್ನನು ಲೋಕೋ ಪೈಲಟ್ ಗಮನಿಸಿದ್ದಾರೆ. ಈ ವೇಳೆ 40 ಅಡಿ ದೂರದಲ್ಲಿಯೇ ರೈಲು ನಿಲ್ಲಿಸಿದ್ದಾರೆ. ಕೂಡಲೇ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 

ಮಾಹಿತಿ ತಿಳಿದ ಕೂಡಲೇ ಬೈಯಪ್ಪನಹಳ್ಳಿ ರೈಲ್ವೇ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಹಂತಕರು ಕೊಲೆ ಪ್ರಕರಣವನ್ನು ಆತ್ಮಹತ್ಯೆಯೆಂದು ಬಿಂಬಿಸಲು ಯತ್ನಿಸಿದ್ದರು. ಆದರೆ, ಲೋಕೋಪೈಲಟ್ ನೀಡಿದ ಮಾಹಿತಿ ನೆರವಿನಿಂದ ಕೊಲೆ ಪ್ರಕರಣವನ್ನು 24 ಗಂಟೆಗಳಲ್ಲಿ ಭೇದಿಸಲಾಯಿತು. 

ರೈಲ್ವೇ ಹಳಿಗಳ ಮೇಲೆ ಬಿದ್ದಿದ್ದ ಮೃತದೇಹ 48 ವರ್ಷದ ಲೋಕನಾಥ್ ಎಂಬ ವ್ಯಕ್ತಿಯದ್ದಾಗಿತ್ತು. ಈತ ಶಕ್ತಿನಗರ ನಿವಾಸಿಯಾಗಿದ್ದಾರೆ. ಪ್ರಕರಣ ಸಂಬಂಧ ಆತನ ಪತ್ನಿ ಯಶೋಧ (40) ಹಾಗೂ ಆಕೆಯ ಸ್ನೇಹಿತರಾದ ಮುನಿರಾಜು  (33), ಪ್ರಭು ಪಿ (27) ಎಂಬುವವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT