ಸಂಗ್ರಹ ಚಿತ್ರ 
ರಾಜ್ಯ

ಕೊಡಗಿನಲ್ಲಿ ನಾಲ್ವರು ಕಳ್ಳ ಬೇಟೆಗಾರರ ಬಂಧನ

ಕೊಡಗು ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಬಂಧಿಸಿ ಅವರಿಂದ ಬೇಟೆಯಾಡಿದ್ದ ಪ್ರಾಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಬಂಧಿಸಿ ಅವರಿಂದ ಬೇಟೆಯಾಡಿದ್ದ ಪ್ರಾಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೊದಲ ಘಟನೆಯಲ್ಲಿ ಇಬ್ಬರು ಬೇಟೆಗಾರರು ಸೋಮವಾರ ಪೇಟೆ ತಾಲ್ಲೂಕಿನ ಜೇನುಕಲ್ಲು ರಕ್ಷಿತಾರಣ್ಯಕ್ಕೆ ನುಗ್ಗಿ ಪ್ರಾಣಿಗಳ ಬೇಟೆಯಾಡಿದ್ದಾರೆ. ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಹೊಸ ಗ್ರಾಮದ ಕಾವೇರಪ್ಪ ಅಲಿಯಾಸ್‍ ತಮೂ ಎಂಬಾತನ ಮನೆ ಮೇಲೆ ದಾಳಿ ನಡೆಸಿ ಎರಡು ಜಾತಿ ಜಿಂಕೆಗಳ ಐದು ಕೆ.ಜಿ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

ಅಲ್ಲದೆ, ಬಂಧಿತನಿಂದ ಬಂದೂಕು ಮತ್ತು ಮೂರು ಜೀವಂತ ಗುಂಡುಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಕಾವೇರಪ್ಪನ ಜೊತೆಗಿದ್ದ ಮತ್ತೊಬ್ಬ ಬೇಟೆಗಾರ ಸುರೇಶ್‍ ನನ್ನೂ ಬಂಧಿಸಲಾಗಿದೆ. ಆರೋಪಿಗಳಿಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಿಂಕೆ ಮಾಂಸವನ್ನು ಕೆಲ ಗ್ರಾಮಸ್ಥರೊಂದಿಗೆ ಹಂಚಿಕೊಂಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಮತ್ತೊಂದು ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದಿಂದ ವರದಿಯಾಗಿದ್ದು, ಬೇಟೆಗಾರರು ಅರಣ್ಯ ನುಗ್ಗಿ ಪ್ರಾಣಿಗಳತ್ತ ಗುಂಡು ಹಾರಿಸಿದಾಗ, ಗುಂಡೇಟಿನ ಶಬ್ಧ ಕೇಳಿದ ಅರಣ್ಯ ಇಲಾಖೆ ಸಿಬ್ಬಂದಿ ಜಾಗೃತರಾಗಿ ಇತರ ತಂಡಗಳನ್ನು ಎಚ್ಚರಿಸಿದ್ದಾರೆ. ಕಾರ್ ನಲ್ಲಿ ಬಿರುನಾಣಿ ಗ್ರಾಮದ ಮೂಲಕ ಅರಣ್ಯ ಗಡಿಯಲ್ಲಿ ಇಳಿದು ಕಾಡಿಗೆ ನುಗ್ಗಿದ್ದ ಆರು ಬೇಟೆಗಾರರ ಪೈಕಿ ಪ್ರೀತಮ್‍ ಮತ್ತು ರಾಬಿನ್‍ ತಿಮ್ಮಯ್ಯ ಎಂಬುವವರನ್ನು ಅರಣ್ಯ ಸಿಬ್ಬಂದಿ ಬಂದಿಸಿದ್ದಾರೆ. ಇತರ ನಾಲ್ವರು ಕತ್ತಲಲ್ಲಿ ಪರಾರಿಯಾಗಿದ್ದಾರೆ. ಬಂಧಿತರಿಂದ ಜಿಂಕೆ ಮರಿ ಮೃತದೇಹ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT