ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ: ರಾಜ್ಯದಲ್ಲಿ 22 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ರಾಜ್ಯದಲ್ಲಿ ಕೆಲ ದಿನಗಳಿಂದ ತುಸು ತಗ್ಗಿದಂತೆ ಕಂಡಿದ್ದ ಕೊರೋನಾ ಸೋಮವಾರ ಮತ್ತೆ ಅಬ್ಬರಿಸಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ ಬರೋಬ್ಬರಿ 476 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 20 ಸಾವಿರ ಗಡಿ ದಾಟಿದೆ. 

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ತುಸು ತಗ್ಗಿದಂತೆ ಕಂಡಿದ್ದ ಕೊರೋನಾ ಸೋಮವಾರ ಮತ್ತೆ ಅಬ್ಬರಿಸಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ ಬರೋಬ್ಬರಿ 476 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 20 ಸಾವಿರ ಗಡಿ ದಾಟಿದೆ. 

ರಾಜ್ಯದಲ್ಲಿ ಕಳೆದ 4 ದಿನಗಳಿಂದ 400ರ ಸಮೀಪದಲ್ಲಿದ್ದ ಸಾವಿನ ಪ್ರಮಾಣ ಒಮ್ಮೆಲೆ 476ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದ ಒಂದರಲ್ಲಿಯೇ 239 ಮಂದಿ ಮರಣವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 22,313ಕ್ಕೆ ಏರಿಕೆಯಾಗಿದ್ದರೆ, ಬೆಂಗಳೂರಿನಲ್ಲಿ 9,722ಕ್ಕೆ ತಲುಪಿದೆ.

ಇದೀಗ ರಾಜ್ಯದ ಮರಣ ಪ್ರಮಾಣ ಶೇ.0.99ರಷ್ಟಿದ್ದರೆ, ಬೆಂಗಳೂರು ನಗರದ ಸಾವಿನ ಪ್ರಮಾಣ ಶೇ.0.90ರಿಂದ ಶೇ.0.91ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ 34,635 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 16.16 ಲಕ್ಷಕ್ಕೆ ಏರಿಕೆಯಾಗಿದೆ. ಈ ಮಧ್ಯೆ 6.03 ಲಕ್ಷ ಸಕ್ರಿಯ ಪ್ರಕರಣಗಳಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT