ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು 58,395 ಜನರು ಗುಣಮುಖ, ಒಂದೇ ದಿನ ಅತಿ ಹೆಚ್ಚು ಚೇತರಿಕೆ!

Nagaraja AB

ಬೆಂಗಳೂರು: ರಾಜ್ಯದ ಜನತೆಗೊಂದು ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಇಂದು ಒಂದೇ ದಿನ 58 ಸಾವಿರದ 395 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ರಾಜ್ಯದಲ್ಲಿ ಇಂದು 30,309 ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆ ಸಂಖ್ಯೆಯನ್ನು ಮೀರಿಸಿದೆ.  

ಬೆಂಗಳೂರಿನಲ್ಲಿ 8676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನರು ಗುಣಮುಖರಾಗಿದ್ದಾರೆ ಎಂದು ಸಚಿವ ಡಾ. ಕೆ. ಸುಧಾಕರ್ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

SCROLL FOR NEXT