ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಒಂದೇ ದಿನ 58,000 ಮಂದಿ ಗುಣಮುಖ, ಚೇತರಿಕೆಯಲ್ಲಿ ದೇಶದಲ್ಲೇ ಅಗ್ರಸ್ಥಾನ ಪಡೆದ ಕರ್ನಾಟಕ

ಒಂದು ತಿಂಗಳಿಂದ ರಾಜ್ಯದಲ್ಲಿ ಆತಂಕ ಹೆಚ್ಚಿಸುತ್ತಿದ್ದ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಸ್ವಲ್ಪ ಇಳಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 58,295 ಮಂದಿ ಗುಣಮುಖರಾಗಿದ್ದು, ಚೇತರಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕ ಅಗ್ರಸ್ಥಾನವನ್ನು ಪಡೆದುಕೊಂಡಿದೆ. 

ಬೆಂಗಳೂರು: ಒಂದು ತಿಂಗಳಿಂದ ರಾಜ್ಯದಲ್ಲಿ ಆತಂಕ ಹೆಚ್ಚಿಸುತ್ತಿದ್ದ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಸ್ವಲ್ಪ ಇಳಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 58,295 ಮಂದಿ ಗುಣಮುಖರಾಗಿದ್ದು, ಇದು ಸಾರ್ವಜಕಾಲಿಕ ದಾಖಲೆಯಾಗಿದೆ. ಅಲ್ಲದೆ, ಚೇತರಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕ ಅಗ್ರಸ್ಥಾನವನ್ನು ಪಡೆದುಕೊಂಡಿದೆ. 

ಮೇ.16ರಂದು 36,475 ಮಂದಿ ಗುಣಮುಖರಾಗಿದ್ದು, ಈ ವರೆಗಿನ ದಾಖಲೆಯಾಗಿತ್ತು. ಮಂಗಳವಾರ ನಿಮಿಷಕ್ಕೆ 41 ಮಂದಿ ಕೋವಿಡ್ ಸೋಂಕಿನಿಂದ ಮುಕ್ತರಾಗಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಗುಣಮುಖರಾಗಿರುವ ಕಾರಣ 6 ಲಕ್ಷ ದಾಟಿದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ 5.75 ಲಕ್ಷಕ್ಕೆ ಇಳಿದಿದೆ. 

ರಾಜ್ಯದಲ್ಲಿ ಈ ವರೆಗೂ 72.08ರಷ್ಟಿದ್ದ ಚೇತರಿಕೆ ಪ್ರಮಾಣ ಇದೀಗ ಶೇ.73.68ಕ್ಕೆ ಏರಿಕೆಯಾಗಿದೆ. ಮೇ. 9 ಮತ್ತು ಮೇ.11ರ ಈ ಎರಡು ದಿನಗಳನ್ನು ಹೊರತುಪಡಿಸಿದರೆ ಮೇ.12 ರಿಂದಲೂ ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಏರಿಕೆಯಾಗುತ್ತಲೇ ಬರುತ್ತಿದೆ. 

ಬೆಂಗಳೂರಿನಲ್ಲಿ 3,64,382 ರಷ್ಟಿದ್ದ ಸಕ್ರಿಯ ಪ್ರಕರಣಗಳ 3,40,965 ಕ್ಕೆ ಇಳಿಕೆಯಾಗಿದೆ. ಸಿಲಿಕಾನ್ ಸಿಟಿಯಲ್ಲಿ ಮೇ.16 ಮತ್ತು 18ರಂದು ಶೇ.64.71ರಷ್ಟಿದ್ದ ಚೇತರಿಕೆ ಪ್ರಮಾಣ ಇದೀಗ ಶೇ.67.29ಕ್ಕೆ ಏರಿಕೆಯಾಗಿದೆ. 

ಗುಣಮುಖರ ಸಂಖ್ಯೆ ಏರಿಕೆಯಾಗಿ, ಸಕ್ರಿಯ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ ರಾಜ್ಯದಲ್ಲಿ ಸಾವಿನ ಪ್ರಮಾಣ ಮಾತ್ರ ಏರುತ್ತಲೇ ಇದೆ. 

ರಾಜ್ಯದಲ್ಲಿ 5 ದಿನಗಳ ಬಳಿಕ ಸಾವಿನ ಪ್ರಮಾಣ 500ರ ಗಡಿ ದಾಟಿದೆ. ಮಂಗಳವಾರ 525 ಜನರು ಮೃತಪಟ್ಟಿದ್ದಾರೆ. ಈ ಮೊದಲು ಮೇ.7 ರಂದು 592, ಮೇ.10ರಂದು 596, ಮೇ.12 ರಂದು 512 ಮಂದಿ ಅಸುನೀಗಿದ್ದರು. 

ಇದೇ ವೇಳೆ ಶೇ.1.73 ಮರಣ ಪ್ರಮಾಣ ದಾಖಲಾಗಿದೆ. ಫೆ.24 ರಂದು ಶೇ.1.79 ಮರಣ ಪ್ರಮಾಣ ದಾಖಲಾಗಿದ್ದು, ಆ ಬಳಿಕದ ಗರಿಷ್ಠ ಮರಣ ಪ್ರಮಾಣ ಈಗ ವರದಿಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT