ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ 
ರಾಜ್ಯ

ರಾಜ್ಯದಲ್ಲೂ ಡಿಆರ್'ಡಿಒ ವತಿಯಿಂದ ಕೋವಿಡ್ ಕೇಂದ್ರ ಆರಂಭಿಸಲು ಸಹಾಯ ಮಾಡಿ: ರಾಜನಾಥ್ ಸಿಂಗ್'ಗೆ ಸವದಿ ಪತ್ರ

ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಲು ಸಹಾಯ ಮಾಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ ಮತ್ತು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್ ಡಿಒ  ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಲು ಸಹಾಯ ಮಾಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ ಮತ್ತು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ಮನವಿ ಮಾಡಿಕೊಂಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಸವದಿಯವರು, ದೆಹಲಿ, ವಾರಣಾಸಿ, ಅಹಮದಾಬಾದ್, ಮತ್ತು ಲಖ್ನೋಗಳಲ್ಲಿ ಡಿಆರ್ ಡಿಒ  ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಿರುವುದಕ್ಕೆ ಅಭಿನಂದಿಸಿದ್ದಾರೆ.

ಅಲ್ಲದೆ, ಕರ್ನಾಟಕದಲ್ಲಿಯೂ ಪ್ರಸ್ತುತ ಕೋವಿಡ್ ಅಪಾಯಕಾರಿ ಪ್ರಮಾಣದಲ್ಲಿ ಹೆಚ್ಚಿರುವುದರಿಂದ ಇಲ್ಲಿನ ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಅಧಿಕವಾಗಿದೆ. ವೈದ್ಯರುಗಳ ಮೇಲೆ ಒತ್ತಡವೂ ತೀವ್ರವಾಗಿದೆ. ಆದ್ದರಿಂದ ಕರ್ನಾಟಕದಲ್ಲಿಯೂ ಆದಷ್ಟು ಶೀಘ್ರವಾಗಿ ಸುಸಜ್ಜಿತ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುವುದು ಸೂಕ್ತ. ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಸ್ವಾಮ್ಯದಲ್ಲಿ ಸಾಕಷ್ಟು ಖಾಲಿ ಜಾಗಗಳೂ ಈಗ ಲಭ್ಯವಿದೆ. 

ಇದನ್ನು ಬಳಕೆ ಮಾಡಿಕೊಂಡು ರಕ್ಷಣಾ ಇಲಾಖೆಯಿಂದ ತಕ್ಷಣವೇ ಕೋವಿಡ್ ಕೇಂದ್ರಗಳನ್ನು ಪ್ರಾರಂಭಿಸಿದರೆ ಸಾಕಷ್ಟು ರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಬೇಕೆಂದು ಡಿಸಿಎಂ ಸವದಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT