ಡಾ.ಗಿರಿಧರ ಆರ್ ಬಾಬು 
ರಾಜ್ಯ

ರಾಜ್ಯ ಸರ್ಕಾರ ಕೋವಿಡ್ ಪರೀಕ್ಷೆ ಕಡಿಮೆ ಮಾಡುವ ಮೂಲಕ ಮತ್ತೊಂದು ಅಲೆಯನ್ನು ಆಹ್ವಾನಿಸುತ್ತಿದೆ: ತಜ್ಞರ ಎಚ್ಚರಿಕೆ

ಕರ್ನಾಟಕದಲ್ಲಿ ಒಂದು ತಿಂಗಳ ಹಿಂದೆ ಪ್ರತಿದಿನ 1.9 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು. ಈಗ ಅದನ್ನು ಕೇವಲ 93,000ಕ್ಕೆ ಇಳಿಸುವ ಮೂಲಕ ರಾಜ್ಯದಲ್ಲಿ ಮತ್ತೊಂದು...

ಬೆಂಗಳೂರು: ಕರ್ನಾಟಕದಲ್ಲಿ ಒಂದು ತಿಂಗಳ ಹಿಂದೆ ಪ್ರತಿದಿನ 1.9 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು. ಈಗ ಅದನ್ನು ಕೇವಲ 93,000ಕ್ಕೆ ಇಳಿಸುವ ಮೂಲಕ ರಾಜ್ಯದಲ್ಲಿ ಮತ್ತೊಂದು ಕೊರೋನಾ ಅಲೆಯನ್ನುಆಹ್ವಾನಿಸಲಾಗುತ್ತಿದೆ ಎಂದು ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ(ಟಿಎಸಿ)ಯ ಸದಸ್ಯರೊಬ್ಬರು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಸೋಮವಾರ 97,236 ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, ಅದರಲ್ಲಿ 38,603 ಮಂದಿಗೆ ಪಾಸಿಟಿವ್ ಬಂದಿದೆ. ಮಂಗಳವಾರ 93,247 ಪರೀಕ್ಷೆಗಳನ್ನು ನಡೆಸಲಾಗಿದ್ದು, 30,309 ಜನರಿಗೆ ಪಾಸಿಟಿವ್ ಬಂದಿದೆ.

ಇದು ಕಳೆದ ಏಪ್ರಿಲ್ 28 ರಂದು 1.72 ಲಕ್ಷ ಮತ್ತು ಏಪ್ರಿಲ್ 24 ರಂದು ನಡೆಸಿದ 1.9 ಲಕ್ಷ ಕೋವಿಡ್ ಪರೀಕ್ಷೆಗಳಿಗೆ ತದ್ವಿರುದ್ಧವಾಗಿದೆ ಎಂದಿದ್ದಾರೆ.

ಇನ್ನೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳದವರು ಸೋಂಕನ್ನು ಮತ್ತಷ್ಟು ಹರಡಬಹುದು ಎಂದು ಟಿಎಸಿ ಸದಸ್ಯ ಮತ್ತು ಭಾರತದ ಸಾರ್ವಜನಿಕ ಆರೋಗ್ಯ ಪ್ರತಿಷ್ಠಾನದ ಸಾಂಕ್ರಾಮಿಕ ರೋಗಶಾಸ್ತ್ರ ಪ್ರಾಧ್ಯಾಪಕ ಡಾ.ಗಿರಿಧರ ಆರ್ ಬಾಬು ಹೇಳಿದ್ದಾರೆ.

"ಒಂದು ರೀತಿಯಲ್ಲಿ ನಾವು ಮೂರನೇ ಅಲೆಯನ್ನು ಆಹ್ವಾನಿಸುತ್ತಿದ್ದೇವೆ. ಏಕೆಂದರೆ ಜನರು ಸೋಂಕನ್ನು ಹರಡುತ್ತಿದ್ದಾರೆ ಮತ್ತು ಅದು ವೇಗವಾಗಿ ಹರಡುತ್ತದೆ. ನಂತರ ಅದು ಹೆಚ್ಚು ಸೋಂಕಿಗೆ ಕಾರಣವಾಗುತ್ತದೆ ಮತ್ತು ನಾವು ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ. ಇದಕ್ಕೆ ಇರುವ ಏಕೈಕ ಪರಿಹಾರವೆಂದರೆ ವ್ಯಾಪಕವಾಗಿ ಪರೀಕ್ಷಿಸುವುದು" ಎಂದು ಬಾಬು ಪಿಟಿಐಗೆ ತಿಳಿಸಿದ್ದಾರೆ.

ಪರೀಕ್ಷೆಗಳನ್ನು ಕಡಿಮೆ ಮಾಡುವುದು ಸರ್ಕಾರದ ವೆಚ್ಚ ಕಡಿತ ಕ್ರಮವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದುಹೋದ ಜೀವಗಳನ್ನು ಟೆಸ್ಟ್ ಕಿಟ್ ಬೆಲೆಗೆ ಹೋಲಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT