ಬೆಂಗಳೂರಿಗೆ ಬಂದ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು 
ರಾಜ್ಯ

ಬೆಂಗಳೂರಿಗೆ 5ನೇ ಬಾರಿಗೆ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಆಗಮನ: 180 ಟನ್ ಆಕ್ಸಿಜನ್ ಪೂರೈಕೆ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿರುವಂತೆಯೇ ಕೇಂದ್ರ ಸರ್ಕಾರ 5ನೇ ಬಾರಿಗೆ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲನ್ನು ಕರ್ನಾಟಕಕ್ಕೆ ಕಳುಹಿಸಿದ್ದು, 180 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ಬೆಂಗಳೂರಿಗೆ ರವಾನಿಸಿದೆ.

ಬೆಂಗಳೂರು: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿರುವಂತೆಯೇ ಕೇಂದ್ರ ಸರ್ಕಾರ 5ನೇ ಬಾರಿಗೆ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲನ್ನು ಕರ್ನಾಟಕಕ್ಕೆ ಕಳುಹಿಸಿದ್ದು, 180 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ಬೆಂಗಳೂರಿಗೆ ರವಾನಿಸಿದೆ.

ಇಂದು ಮುಂಜಾನೆ 1.05ಕ್ಕೆ ರಾಜ್ಯಕ್ಕೆ 180 ಮೆಟ್ರಿಕ್ ಟನ್ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಜಾರ್ಖಂಡ್ ನ ಟಾಟಾ ನಗರದಿಂದ ಬೆಂಗಳೂರಿಗೆ ಬಂದು ತಲುಪಿದೆ. ಒಟ್ಟು 8 ಕಂಟೇನರ್ ಗಳಲ್ಲಿ ಸುಮಾರು 180 ಮೆಟ್ರಿಕ್ ಟನ್ ನಷ್ಟು ತೂಕದ ಆಮ್ಲಜನಕ ಹೊತ್ತು ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ಆಗಮಿಸಿದೆ. ಈ ಹಿಂದೆ ಅಂದರೆ ಮೇ 11ರಂದು ಮತ್ತು ಮೇ 15ರಂದು ಇದೇ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಟಾಟಾನಗರ ಮತ್ತು ಕಳಿಂಗ ನಗರದಿಂದ ಒಟ್ಟು 240 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತು ಬೆಂಗಳೂರಿಗೆ ತಲುಪಿತ್ತು. 

ಇದೀಗ ಸುಮಾರು 180 ಟನ್ ತೂಕದ ಆಕ್ಸಿಜನ್ ಹೊತ್ತ ರೈಲು ವೈಟ್ ಫೀಲ್ಡ್ ನಿಲ್ಜಾಣಕ್ಕೆ ಬಂದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT