ತಾಯಿ ಜೊತೆ ಶಾಸಕ ರಾಜೀವ್ 
ರಾಜ್ಯ

'ಜನ್ಮನೀಡಿ, ಎದೆ ಹಾಲುಣಿಸಿ, ಕೈತುತ್ತು ನೀಡಿ, ಸೆರಗಿನಿಂದ ಮೈ ಒರೆಸಿದ ನನ್ನವ್ವ ನನ್ನನ್ನು ಅನಾಥವಾಗಿಸಿದಳು'

ಕುಡಚಿ ಶಾಸಕ ಪಿ. ರಾಜೀವ್ ಅವರ ತಾಯಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 

ಬೆಳಗಾವಿ: ಕುಡಚಿ ಶಾಸಕ ಪಿ. ರಾಜೀವ್ ಅವರ ತಾಯಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 

ಕೆಲ ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಪಿ ರಾಜೀವ್ ಅವರ ತಾಯಿ ಕಳೆದ ಒಂದು ವಾರದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ಕುಗ್ಗಿರುವ ಶಾಸಕ ಪಿ ರಾಜೀವ್ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕರಾಗಿ ವಿಷಯ ತಿಳಿಸಿದ್ದು, ‘ಜನ್ಮನೀಡಿ, ಎದೆ ಹಾಲುಣಿಸಿ, ಕೈತುತ್ತು ನೀಡಿ, ಸೆರಗಿನಿಂದ ಮೈ ಒರೆಸಿ, ಅಕ್ಕರೆಯಿಂದ ಬದುಕಿನ ಮೌಲ್ಯಗಳನ್ನು ತಿಳಿಸಿ ಬೆಳೆಸಿದ ನನ್ನವ್ವ ಕರೊನಾಗೆ ಬಲಿಯಾಗಿ ಇಂದು ನನ್ನನ್ನು ಅನಾಥವಾಗಿಸಿದಳು. ಆಕೆಯ ಅಗಲಿಕೆ ನನ್ನ ಹೃದಯವನ್ನು ಅಲುಗಾಡಿಸಿದೆ ಎಂದು ಹೇಳಿದ್ದಾರೆ.

ಅಲ್ಲದೇ, ‘ನಾನು, ನನ್ನ ಹೆಂಡತಿ, ಎರಡು ಮಕ್ಕಳು, ಇಬ್ಬರು ಆಪ್ತ ಸಹಾಯಕರು ಕೊರೋನಾದಿಂದ ಚೇತರಿಸಿಕೊಳ್ಳುವಷ್ಟರಲ್ಲಿ ತಾಯಿಯವರು ಸೋಂಕಿಗೆ ಒಳಗಾಗಿದ್ದರಿಂದ ಅವರ ಆರೈಕೆಯಲ್ಲಿ ನಾನೇ ತೊಡಗಿದ್ದೆ, ನನ್ನಕ್ಕ ಹಾಗೂ ಅಕ್ಕನ ಮಗ ಚಿಕಿತ್ಸೆಯನ್ನು ಮನೆಯಲ್ಲಿಯೇ ಪಡೆಯುತ್ತಿರುವುದರಿಂದ ಯಾರಿಗೂ ತಿಳಿಸದೆ ಮಾರ್ಗಸೂಚಿಯನ್ವಯ ಅಂತ್ಯಸಂಸ್ಕಾರವನ್ನು ನೆರವೇರಿಸಿರುತ್ತೇನೆ. ನನ್ನ ಮನೆಯ ವಾತಾವರಣ ಸದ್ಯಕ್ಕೆ ಹೆಚ್ಚು ಸೋಂಕುಪೀಡಿತವಾಗಿರುವುದರಿಂದ ಯಾರೂ ಸಹ ಸಾಂತ್ವನ ಹೇಳುವುದಕ್ಕಾಗಿ ಆಗಮಿಸಬಾರದೆಂದು ವಿನಂತಿಸುತ್ತೇನೆ. ಆದಷ್ಟು ಬೇಗ ನನ್ನ ನನ್ನ ಸಾಮಾಜಿಕ ಕರ್ತವ್ಯಕ್ಕೆ ಹಾಜರಾಗುತ್ತೇನೆಂದು ತಮ್ಮಲ್ಲಿ ಕೋರಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT