ಸಿಎಂ ಯಡಿಯೂರಪ್ಪ 
ರಾಜ್ಯ

ಕೋವಿಡ್ ಸಾಂಕ್ರಾಮಿಕಕ್ಕೆ ಕರ್ನಾಟಕ ತತ್ತರ: ಐಐಟಿ ಕಾನ್ಪುರ್ ಮಾದರಿ ಸೂತ್ರ ಪಾಲನೆಗೆ ರಾಷ್ಟ್ರೀಯ ತಜ್ಞರಿಂದ ಸಲಹೆ!

ಕೋವಿಡ್ ಸಾಂಕ್ರಾಮಿಕದ 2ನೇ ಅಲೆಯಲ್ಲಿ ಸೋಂಕು ಹೆಚ್ಚಳದಿಂದಾಗಿ ತತ್ತರಿಸಿ ಹೋಗಿರುವ ಕರ್ನಾಟಕಕ್ಕೆ ಐಐಟಿ ಕಾನ್ಪುರ್ ಮಾದರಿ ಸೂತ್ರ ಪಾಲನೆಗೆ ರಾಷ್ಟ್ರೀಯ ತಜ್ಞರು ಸಲಹೆ ನೀಡಿದ್ದಾರೆ.

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ 2ನೇ ಅಲೆಯಲ್ಲಿ ಸೋಂಕು ಹೆಚ್ಚಳದಿಂದಾಗಿ ತತ್ತರಿಸಿ ಹೋಗಿರುವ ಕರ್ನಾಟಕಕ್ಕೆ ಐಐಟಿ ಕಾನ್ಪುರ್ ಮಾದರಿ ಸೂತ್ರ ಪಾಲನೆಗೆ ರಾಷ್ಟ್ರೀಯ ತಜ್ಞರು ಸಲಹೆ ನೀಡಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೊಂದಿಗೆ ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡು ಚರ್ಚೆ ನಡೆಸಿದ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ಐಐಟಿ ಕಾನ್ಪುರ್ ಸೂತ್ರ ಮಾದರಿಯನ್ನು ವಿವರಿಸಿದರು. 

ವಿವಿಧ ಜಿಲ್ಲೆಗಳಲ್ಲಿ ಉತ್ತುಂಗಕ್ಕೇರಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಪ್ರಕ್ಷೇಪಗಳು ಮತ್ತು ಅಧ್ಯಯನಗಳನ್ನು ಒಳಗೊಂಡಿರುವ ಈ ಮಾದರಿಯು ಕರ್ನಾಟಕಕ್ಕೆ ಪ್ರಯೋಜನವನ್ನು ನೀಡುತ್ತದೆ ಎಂದು ಸುಬ್ರಮಣಿಯನ್ ಹೇಳಿದರು. 

ಅಂತೆಯೇ ತಾವು ಕರ್ನಾಟಕ ರಾಜ್ಯದಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡಿದ್ದು, ವಿಶೇಷವಾಗಿ ರಾಜ್ಯದ ಉತ್ತರ ಭಾಗಗಳಲ್ಲಿನ ಗ್ರಾಮೀಣ ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿದ್ದಾಗಿ ಹೇಳಿದ್ದಾರೆ. ಅಂತೆಯೇ ಔಷಧದ ಮೇಲೆ ಇತರ ದೇಶಗಳು ಅಳವಡಿಸಿಕೊಂಡಿರುವ ಸಿದ್ಧತೆಗಳು ಮತ್ತು  ಕಾರ್ಯತಂತ್ರಗಳ ಬಗ್ಗೆಯೂ ಕೃಷ್ಣಮೂರ್ತಿ ಸುಬ್ರಮಣಿಯನ್ ಮತ್ತು ಸಿಎಂ ಬಿಎಸ್ ಯಡಿಯೂರಪ್ಪ ಚರ್ಚಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT