ಸಂಸದೆ ಶೋಭಾ ಕರಂದ್ಲಾಜೆ 
ರಾಜ್ಯ

ಕ್ರಿಶ್ಚಿಯನ್ನರ ವಿರುದ್ಧ ಸುಳ್ಳು ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ಐವಾನ್ ಡಿಸೋಜಾ ದೂರು ದಾಖಲು!

ಶ್ಚಿಯನ್ನರು ಕೋವಿಡ್-19 ವಿರುದ್ಧದ ಲಸಿಕೆ ತೆಗೆದುಕೊಳ್ಳದಂತೆ ಆ ಸಮುದಾಯದ ಮುಖಂಡರು ಸಲಹೆ ನೀಡಿದ್ದಾರೆ ಎಂಬ ಸುಳ್ಳು ಹೇಳಿಕೆಗಾಗಿ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಗುರುವಾರ ದೂರು ದಾಖಲಿಸಿದ್ದಾರೆ.

ಮಂಗಳೂರು: ಕ್ರಿಶ್ಚಿಯನ್ನರು ಕೋವಿಡ್-19 ವಿರುದ್ಧದ ಲಸಿಕೆ ತೆಗೆದುಕೊಳ್ಳದಂತೆ ಆ ಸಮುದಾಯದ ಮುಖಂಡರು ಸಲಹೆ ನೀಡಿದ್ದಾರೆ ಎಂಬ ಸುಳ್ಳು ಹೇಳಿಕೆಗಾಗಿ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಗುರುವಾರ ದೂರು ದಾಖಲಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರ ಹೇಳಿಕೆಯನ್ನು ಮಂಗಳೂರು ಡಯೋಸೆಸ್, ಉಡುಪಿ ಕ್ಯಾಥೊಲಿಕ್ ಸಭಾ ಮತ್ತು ಮಲಂಕರ ಆರ್ಥೊಡಾಕ್ಸ್ ಚರ್ಚ್  ಖಂಡಿಸಿವೆ. ಕ್ರಿಶ್ಚಿಯನ್ ಸಮುದಾಯವನ್ನು ದೇಶ ವಿರೋಧಿಗಳೆಂದು ಶೋಭಾ ಕರಂದ್ಲಾಜೆ ಆರೋಪಿಸಿರುವುದು ದೇಶದ ಪ್ರಜಾಸತಾತ್ಮಕ ವ್ಯವಸ್ಥೆಯಲ್ಲಿ ಕಪ್ಪು ಚುಕ್ಕೆಯಾಗಿದೆ ಎಂದು ಡಿಸೋಜಾ ಹೇಳಿದರು.

ರಾಜಕೀಯ ಹಿತಾಸಕ್ತಿಯಿಂದ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸಲು ಶೋಭಾ ಕರಂದ್ಲಾಜೆ ಪ್ರಯತ್ನಿಸಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು. ನಗರ ಪೊಲೀಸ್ ಆಯುಕ್ತರು ಮತ್ತು ಪಂಡೇಶ್ವರ್ ಪೊಲೀಸ್ ಇನ್ಸ್ ಪೆಕ್ಟರ್ ಅವರಿಗೆ ದೂರನ್ನು ಸಲ್ಲಿಸಲಾಗಿದೆ.

ಚಿಕ್ಕಮಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಮಲೆನಾಡು ವಲಯದ ಚರ್ಚ್ ಗಳಲ್ಲಿ ಕೋವಿಡ್-19 ಲಸಿಕೆ ಪಡೆಯದಂತೆ ಕ್ರಿಶ್ಚಿಯನ್ನರಿಗೆ ಸಲಹೆ ನೀಡಲಾಗಿದೆ ಎಂದು ಹೇಳಿರುವುದಾಗಿ ವರದಿಯಾಗಿದೆ.

ಈ ವಿಚಾರದಲ್ಲಿ ಕ್ಯಾಥೋಲಿಕ್ ಸಮುದಾಯದವರ ತಪ್ಪಿಲ್ಲ. ಆದರೆ, ಪೆಂಟೆಕೋಸ್ಟ್ ನಂತಹವರು ಜನರನ್ನು ಹಾದಿ ತಪ್ಪಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದರು. ಶೋಭಾ ಕರಂದ್ಲಾಜೆ ಅವರ ಹೇಳಿಕೆ ತಪ್ಪಿನಿಂದ ಕೂಡಿದ್ದು, ನೋವು ತಂದಿದೆ ಎಂದು ಮಂಗಳೂರು ಡಯೋಸೆಸ್ ಹೇಳಿಕೆಯಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT