ಹೈಕೋರ್ಟ್ 
ರಾಜ್ಯ

'ನಿಮ್ಮ ಕ್ಷೇತ್ರಕ್ಕೆ ಏನು ನೆರವು ನೀಡಿದ್ದೀರಿ' ಕೋವಿಡ್ ಕುರಿತು ನಿರ್ದೇಶನ  ಕೋರಿದ್ದ 3 ಶಾಸಕರಿಗೆ ಹೈಕೋರ್ಟ್ ತರಾಟೆ

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ ಸೊಂಕಿತರ ಪರೀಕ್ಷೆಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದ ಮೂವರು ಶಾಸಕರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ ಸೊಂಕಿತರ ಪರೀಕ್ಷೆಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ
ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದ ಮೂವರು ಶಾಸಕರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಮಾಜಿ ಸ್ಪೀಕರ್‌ ಹಾಗೂ ಕೋಲಾರದ ಶ್ರೀನಿವಾಸಪುರ ಶಾಸಕ ಕೆ.ಆರ್‌.ರಮೇಶ್‌ಕುಮಾರ್, ಶಾಸಕ ಎಚ್‌.ಕೆ.ಪಾಟೀಲ್, ಎಸ್‌.ಆರ್‌.ಪಾಟೀಲ್ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆಗೆ ಮಾನ್ಯ ಮಾಡಲು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ನೇತೃತ್ವದ ನ್ಯಾಯಪೀಠ ನಿರಾಕರಿಸಿದೆ.

ಜೊತೆಗೆ, ಉತ್ತಮ ಸವಲತ್ತುಗಳನ್ನು ಹೊಂದಿರುವ ನೀವು ನಿಮ್ಮ ಕ್ಷೇತ್ರಗಳಲ್ಲಿ ಕೋವಿಡ್‌-19 ರೋಗಿಗಳಿಗೆ ಎಷ್ಟು ಹಾಸಿಗೆಗಳನ್ನು ಒದಗಿಸಿದ್ದೀರಿ, ತುರ್ತು ಪರಿಸ್ಥಿತಿಯಲ್ಲಿ ಎಷ್ಟು ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡಿದ್ದೀರಿ ಎಂದು ಶಾಸಕರನ್ನಯ ನ್ಯಾಯಪೀಠ ಪ್ರಶ್ನಿಸಿದೆ. 

ಖಾಸಗಿ ಆಸ್ಪತ್ರೆಗಳು ಕೋವಿಡ್‌ ಸೋಂಕಿನಿಂದ ಮೃತಪಟ್ಟವರ ದೇಹಗಳನ್ನು ನೀಡುತ್ತಿಲ್ಲ ಎಂದು ರಮೇಶ್‌ಕುಮಾರ್‌ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಇನ್ನೊಬ್ಬ ಶಾಸಕ ಎಚ್ ಕೆ ಪಾಟೀಲ್ ಅವರು, ಆಮ್ಲಜನಕ ಸಿಲಿಂಡರ್‌ಗಳನ್ನು ಶೇಖರಣೆಗಾಗಿ ಲಭ್ಯವಾಗುವಂತೆ ನಿರ್ದೇಶನ ಮಾಡಬೇಕೆಂದು ಮನವಿ ಮಾಡಿದರು.

ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಎಸ್ ಆರ್ ಪಾಟೀಲ್, ಬಾಗಲಕೋಟೆಯಲ್ಲಿ ಕೋವಿಡ್ -19 ರೋಗಿಗಳನ್ನು ಬಿಡುಗಡೆ ಮಾಡಲು ಜಿಲ್ಲಾಡಳಿತವು ನರ್ಸಿಂಗ್ ಹೋಂಗಳನ್ನು ಒತ್ತಾಯಿಸುತ್ತಿದೆ ಎಂದು ಆರೋಪಿಸಿದರು.

ಅರ್ಜಿದಾರರು ಶಾಸಕರಾಗಿ ಖಾಸಗಿ ಆಸ್ಪತ್ರೆಗಳ ಕಾರಣ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟು ಅರ್ಜಿಯನ್ನು ಇತ್ಯರ್ಥಗೊಳಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT