ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ಕಪ್ಪು ಶೀಲಿಂಧ್ರ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿ: ಸರ್ಕಾರಕ್ಕೆ ಕುಮಾರಸ್ವಾಮಿ ಒತ್ತಾಯ

ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ

ಬೆಂಗಳೂರು: ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ' ಕಪ್ಪು ಶಿಲೀಂಧ್ರ ಸೋಂಕನ್ನು (ಮ್ಯೂಕರ್‌ ಮೈಕೊಸಿಸ್‌) ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್‌, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ಇದನ್ನು ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯಗಳಿಗೆ ಸದ್ಯ ಹೇಳಿದೆ. ರಾಜ್ಯವೂ ಈ ಮಾರಕ ಕಾಯಿಲೆಯನ್ನು ಈ ಕೂಡಲೇ 'ಸಾಂಕ್ರಾಮಿಕ' ಎಂಬುದಾಗಿ ಘೋಷಿಸಬೇಕು' ಎಂದು ಹೇಳಿದ್ದಾರೆ. 

'ರೋಗದ ತಡೆಗಾಗಿ ತ್ವರಿತ, ಅಗತ್ಯ ಕ್ರಮ ಕೈಗೊಳ್ಳಲು, ಮುಂಚೂಣಿಯಲ್ಲಿ ಹೋರಾಡುವವರನ್ನು ರಕ್ಷಿಸಲು '1897ರ ಸಾಂಕ್ರಾಮಿಕ ರೋಗ ತಡೆ ಕಾಯಿದೆ'ಯನ್ನು ಕಪ್ಪು ಶಿಲೀಂಧ್ರ ರೋಗದ ವಿಚಾರದಲ್ಲಿ ಜಾರಿ ಮಾಡಲೇಬೇಕಾಗಿದೆ. ಕಪ್ಪು ಶಿಲೀಂಧ್ರ ರೋಗದಲ್ಲಿ ಸಾವಿನ ಸಾಧ್ಯತೆಗಳು ಹೆಚ್ಚಿವೆ. ಮಾರಕ, ಭಯಾನಕವೂ ಆಗಿರುವ ಈ ಕಾಯಿಲೆಯನ್ನು ಹಿಮ್ಮೆಟ್ಟಿಸಲೇಬೇಕಿದೆ' ಎಂದು ರಾಜ್ಯ ಸರ್ಕಾರಕ್ಕೆ ಎಚ್‌ಡಿಕೆ ಸಲಹೆ ನೀಡಿದ್ದಾರೆ.

ಸಾಂಕ್ರಾಮಿಕ ರೋಗಗಳ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರ ತೋರುತ್ತಿರುವ ಆಲಸ್ಯ ಸರಿಯಲ್ಲ. ಕಪ್ಪು ಶಿಲೀಂಧ್ರ ರೋಗದ ನಿರ್ವಹಣೆಯಲ್ಲಿ ಸರ್ಕಾರ ಪದೇಪದೆ ಎಡವುತ್ತಿರುವುದು ಕಾಣಿಸುತ್ತಿದೆ. ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ದಾಸ್ತಾನು ಹೊಂದದೇ ಇರುವುದು, ಅಗತ್ಯ ಪ್ರಮಾಣದ ಔಷಧವನ್ನು ಕೇಳಿ ಪಡೆದುಕೊಳ್ಳದೇ ಇರುವುದು ಇದಕ್ಕೆ ಸಾಕ್ಷಿ' ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

'ಕೋವಿಡ್‌ನಿಂದ ಗುಣವಾದವರೇ ಹೆಚ್ಚಾಗಿ ಕಪ್ಪು ಶಿಲೀಂಧ್ರ ಕಾಯಿಲೆ ತುತ್ತಾಗುತ್ತಾರೆ ಎಂದು ತಜ್ಞರು ಹೇಳಿದ್ದಾರೆ. ಹಾಗಾದರೆ, ಕಪ್ಪು ಶಿಲೀಂಧ್ರದ ಸಂಭಾವ್ಯ ಅಪಾಯ ಕರ್ನಾಟಕಕ್ಕೆ ಹೆಚ್ಚು. ಕೋವಿಡ್‌ ಪ್ರಕರಣಗಳು ಕರ್ನಾಟಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿವೆ. ಅಂದರೆ, ಕಪ್ಪು  ಶಿಲೀಂಧ್ರ ರೋಗವೂ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಅಪಾಯವಿದೆ' ಎಂದು ಕುಮಾರಸ್ವಾಮಿ ಮುನ್ನೆಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT