ರಾಜ್ಯ

ಮೈಸೂರು: ಹಿರಿಯ ಪತ್ರಿಕಾ ಛಾಯಾಗ್ರಾಹಕ ನೇತ್ರ ರಾಜು ಇನ್ನಿಲ್ಲ

Raghavendra Adiga

ಮೈಸೂರು: ಹಿರಿಯ ಪತ್ರಿಕಾ ಛಾಯಾಗ್ರಾಹಕ ನೇತ್ರ ರಾಜು(62) ಹೃದಯಾಘಾತದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.

ಮೃತರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

ರಾಜು ಅವರುಗೆ ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಶ್ರೀ ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಾಸ್ಕುಲರ್ ಸೈನ್ಸಸ್ ಅಂಡ್ ರಿಸರ್ಚ್ ಗೆ ಕರೆದೊಯ್ಯಲಾಯಿತು. ಚಿಕಿತ್ಸೆಗೆ ಸ್ಪಂದಿಸದ ಅವರು ಸಂಜೆ ಕೊನೆಯುಸಿರೆಳೆದರು.

ಅವರು ಎರಡು ದಶಕಗಳ ಕಾಲ ಟೈಮ್ಸ್ ಆಫ್ ಇಂಡಿಯಾ, ಮೈಸೂರು ಬ್ಯೂರೋದಲ್ಲಿ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದರು. ಅವರು ಕರ್ನಾಟಕ ಮಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದರು.

ನೇತ್ರ ರಾಜು ಅವರ ನಿಧನಕ್ಕೆ ಮೈಸೂರು ಜಿಲ್ಲಾ ಪತ್ರಕರ್ತ ಸಂಘದ ಸದಸ್ಯರು ಸಂತಾಪ ಸೂಚಿಸಿದ್ದಾರೆ.

SCROLL FOR NEXT