ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಆರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

 ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಜಾರಿಯಾಗಿರುವ ಲಾಕ್ ಡೌನ್ ನಡುವೆಯೂ ರಾಜ್ಯ ಪೊಲೀಸ್ ಇಲಾಖೆಯಲ್ಲಿ  ಒಟ್ಟು 6 ಹಿರಿಯ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಕೊರೊನಾ ಎರಡನೇ ನಿಯಂತ್ರಿಸಲು ಜಾರಿಯಾಗಿರುವ ಲಾಕ್ ಡೌನ್ ನಡುವೆಯೂ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 6 ಹಿರಿಯ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಅವರನ್ನು ಬೆಂಗಳೂರಿನ ಕಾರಾಗೃಹ ಇಲಾಖೆಯ ಐಜಿಪಿ ಆಗಿ ನೇಮಕ ಮಾಡಲಾಗಿದೆ. ಕಲಬುರಗಿ ಈಶಾನ್ಯ ವಲಯದ ಐಡಿಜಿಪಿ ಮನೀಶ್ ಖರ್ಬಿಕರ್ ಅವರನ್ನು ಬಳ್ಳಾರಿ ವಲಯದ ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರಿನ ಆಡಳಿತ ವಿಭಾಗದ ಐಜಿಪಿ ಆಗಿದ್ದ ಕೆ ವಿ ಶರತ್ ಚಂದ್ರ ಅವರನ್ನು ಸಿಐಡಿ ಅರಣ್ಯ ಘಟಕದ ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ರಾಘವೇಂದ್ರ ಸುಹಾಸ್ ಅವರನ್ನು ಬೆಳಗಾವಿಯ ನಾರ್ಥೆರೆನ್ ವಿಭಾಗದ ಐಜಿಪಿ ಸ್ಧಾನದಿಂದ ಬೆಂಗಳೂರಿನ ಆಂತರಿಕ ಭದ್ರತೆಯ ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಎನ್ ಸತೀಶ್ ಕುಮಾರ್ ಅವರನ್ನು ಕಲಬುರಗಿ ನಗರ ಐಜಿಪಿ ಸ್ಥಾನದಿಂದ ಬೆಳಗಾವಿ ವಿಭಾದ ಐಜಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ.

ಇನ್ನು, ವೈ ಎಸ್ ರವಿ ಕುಮಾರ್ ಅವರನ್ನು ನೇಮಕಾತಿ ವಿಭಾಗದ ಡಿಐಜಿಪಿ ಸ್ಥಾನದಿಂದ ಕಲಬುರಗಿ ನಗರ ವ್ಯಾಪ್ತಿಯ ಡಿಐಜಿ ಹಾಗೂ ಕಮೀಷನರ್ ಆಫ್ ಪೊಲೀಸ್ ಆಗಿ ವರ್ಗಾವಣೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT