ಶಾಂತಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಭಾಗ ಆಟೋದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ 
ರಾಜ್ಯ

ಕೋವಿಡ್ ಟೆಸ್ಟ್ ವರದಿ ಇಲ್ಲವೆಂದು ಆಡ್ಮಿಟ್ ಮಾಡಿಕೊಳ್ಳದ ಸಿಬ್ಬಂದಿ, ಆಸ್ಪತ್ರೆ ಮುಂದೆಯೇ ಮಗುವಿಗೆ ಜನ್ಮ ನೀಡಿದ ಮಹಿಳೆ!

ಕೋವಿಡ್-19 ಟೆಸ್ಟ್ ವರದಿ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಆಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿದ ನಂತರ ಮಹಿಳೆಯೊಬ್ಬರು ಗುರುವಾರ  ತಡರಾತ್ರಿ ಹಾಸನ ಜಿಲ್ಲೆಯ ಶಾಂತಿಗ್ರಾಮ ಪ್ರಾಥಮಿಕ ಆರೋಗ್ಯ ಘಟಕದ ಮುಂಭಾಗ ಮಗುವೊಂದಕ್ಕೆ ಜನ್ಮ ನೀಡಿರುವ ಘಟನೆ ನಡೆದಿದೆ.

ಹಾಸನ: ಕೋವಿಡ್-19 ಟೆಸ್ಟ್ ವರದಿ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಆಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿದ ನಂತರ ಮಹಿಳೆಯೊಬ್ಬರು ಗುರುವಾರ  ತಡರಾತ್ರಿ ಹಾಸನ ಜಿಲ್ಲೆಯ ಶಾಂತಿಗ್ರಾಮ ಪ್ರಾಥಮಿಕ ಆರೋಗ್ಯ ಘಟಕದ ಮುಂಭಾಗ ಮಗುವೊಂದಕ್ಕೆ ಜನ್ಮ ನೀಡಿರುವ ಘಟನೆ ನಡೆದಿದೆ.

ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡ ನಂತರ ಮಹಿಳೆಯ ಪತಿ ಹಾಗೂ ಮಾವ  ಹಲಸಿನಹಳ್ಳಿಯಿಂದ ಶಾಂತಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ತಡರಾತ್ರಿ 12-10ರ ಸುಮಾರಿನಲ್ಲಿ ಆಟೋರಿಕ್ಷಾದಲ್ಲಿಯೇ ಗಂಡು ಮಗುವಿಗೆ ಆ ಮಹಿಳೆ ಜನ್ಮ ನೀಡಿದ್ದಾರೆ.

ಸುದ್ದಿ ತಿಳಿದ ನಂತರ ಆಸ್ಪತ್ರೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ತಾಯಿ ಮತ್ತು ಶಿಶುವನ್ನು ಡೆಲಿವರಿ ವಾರ್ಡ್ ಗೆ ಸ್ಥಳಾಂತರಿಸಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯದಿಂದ ಇರುವುದಾಗಿ ಮೂಲಗಳು ತಿಳಿಸಿವೆ.

ಆಸ್ಪತ್ರೆ ಮುಂಭಾಗ ಸೇರಿದ್ದ ಮಹಿಳೆಯ ಸಂಬಂಧಿಕರು ಹಾಗೂ ಗ್ರಾಮಸ್ಥರು, ಘಟನೆ ವಿರೋಧಿಸಿ ಪ್ರತಿಭಟನೆ ನಡೆಸಿದರು. ಘೋಷಣೆ ಕೂಗುವ ಮೂಲಕ ಆಸ್ಪತ್ರೆ ಸಿಬ್ಬಂದಿಯ ವರ್ತನೆಯನ್ನು ಖಂಡಿಸಿದರು. ಡ್ಯೂಟಿಯಲ್ಲಿದ್ದ ನರ್ಸ್ ಗಳನ್ನು ಅಮಾನತು ಮಾಡಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿಯನ್ನು ಒತ್ತಾಯಿಸಿದರು.

ಇಡೀ ಘಟನೆಯನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಆರೋಪದ ಮೇರೆಗೆ ಆಟೋ ರಿಕ್ಷಾ ಚಾಲಕನ ವಿರುದ್ಧ  ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿಯಲ್ಲಿದ್ದ ನರ್ಸ್ ದೂರು ದಾಖಲಿಸಿದ್ದಾರೆ. ಆಸ್ಪತ್ರೆಗೆ ಬರುವ ಮುನ್ನವೇ ಮಹಿಳೆ ಮಗುವಿನ ಜನ್ಮ ನೀಡಿರುವುದಾಗಿ ನರ್ಸ್ ಒಬ್ಬರು ಹೇಳಿದ್ದಾರೆ.ಈ ಸಂಬಂಧ ಪ್ರತಿಕ್ರಿಯೆಗೆ ಜಿಲ್ಲಾ ಆರೋಗ್ಯಾಧಿಕಾರಿ ಸಿಗುತ್ತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT