ಶಾಂತಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಭಾಗ ಆಟೋದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ 
ರಾಜ್ಯ

ಕೋವಿಡ್ ಟೆಸ್ಟ್ ವರದಿ ಇಲ್ಲವೆಂದು ಆಡ್ಮಿಟ್ ಮಾಡಿಕೊಳ್ಳದ ಸಿಬ್ಬಂದಿ, ಆಸ್ಪತ್ರೆ ಮುಂದೆಯೇ ಮಗುವಿಗೆ ಜನ್ಮ ನೀಡಿದ ಮಹಿಳೆ!

ಕೋವಿಡ್-19 ಟೆಸ್ಟ್ ವರದಿ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಆಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿದ ನಂತರ ಮಹಿಳೆಯೊಬ್ಬರು ಗುರುವಾರ  ತಡರಾತ್ರಿ ಹಾಸನ ಜಿಲ್ಲೆಯ ಶಾಂತಿಗ್ರಾಮ ಪ್ರಾಥಮಿಕ ಆರೋಗ್ಯ ಘಟಕದ ಮುಂಭಾಗ ಮಗುವೊಂದಕ್ಕೆ ಜನ್ಮ ನೀಡಿರುವ ಘಟನೆ ನಡೆದಿದೆ.

ಹಾಸನ: ಕೋವಿಡ್-19 ಟೆಸ್ಟ್ ವರದಿ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಆಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿದ ನಂತರ ಮಹಿಳೆಯೊಬ್ಬರು ಗುರುವಾರ  ತಡರಾತ್ರಿ ಹಾಸನ ಜಿಲ್ಲೆಯ ಶಾಂತಿಗ್ರಾಮ ಪ್ರಾಥಮಿಕ ಆರೋಗ್ಯ ಘಟಕದ ಮುಂಭಾಗ ಮಗುವೊಂದಕ್ಕೆ ಜನ್ಮ ನೀಡಿರುವ ಘಟನೆ ನಡೆದಿದೆ.

ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡ ನಂತರ ಮಹಿಳೆಯ ಪತಿ ಹಾಗೂ ಮಾವ  ಹಲಸಿನಹಳ್ಳಿಯಿಂದ ಶಾಂತಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ತಡರಾತ್ರಿ 12-10ರ ಸುಮಾರಿನಲ್ಲಿ ಆಟೋರಿಕ್ಷಾದಲ್ಲಿಯೇ ಗಂಡು ಮಗುವಿಗೆ ಆ ಮಹಿಳೆ ಜನ್ಮ ನೀಡಿದ್ದಾರೆ.

ಸುದ್ದಿ ತಿಳಿದ ನಂತರ ಆಸ್ಪತ್ರೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ತಾಯಿ ಮತ್ತು ಶಿಶುವನ್ನು ಡೆಲಿವರಿ ವಾರ್ಡ್ ಗೆ ಸ್ಥಳಾಂತರಿಸಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯದಿಂದ ಇರುವುದಾಗಿ ಮೂಲಗಳು ತಿಳಿಸಿವೆ.

ಆಸ್ಪತ್ರೆ ಮುಂಭಾಗ ಸೇರಿದ್ದ ಮಹಿಳೆಯ ಸಂಬಂಧಿಕರು ಹಾಗೂ ಗ್ರಾಮಸ್ಥರು, ಘಟನೆ ವಿರೋಧಿಸಿ ಪ್ರತಿಭಟನೆ ನಡೆಸಿದರು. ಘೋಷಣೆ ಕೂಗುವ ಮೂಲಕ ಆಸ್ಪತ್ರೆ ಸಿಬ್ಬಂದಿಯ ವರ್ತನೆಯನ್ನು ಖಂಡಿಸಿದರು. ಡ್ಯೂಟಿಯಲ್ಲಿದ್ದ ನರ್ಸ್ ಗಳನ್ನು ಅಮಾನತು ಮಾಡಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿಯನ್ನು ಒತ್ತಾಯಿಸಿದರು.

ಇಡೀ ಘಟನೆಯನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಆರೋಪದ ಮೇರೆಗೆ ಆಟೋ ರಿಕ್ಷಾ ಚಾಲಕನ ವಿರುದ್ಧ  ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿಯಲ್ಲಿದ್ದ ನರ್ಸ್ ದೂರು ದಾಖಲಿಸಿದ್ದಾರೆ. ಆಸ್ಪತ್ರೆಗೆ ಬರುವ ಮುನ್ನವೇ ಮಹಿಳೆ ಮಗುವಿನ ಜನ್ಮ ನೀಡಿರುವುದಾಗಿ ನರ್ಸ್ ಒಬ್ಬರು ಹೇಳಿದ್ದಾರೆ.ಈ ಸಂಬಂಧ ಪ್ರತಿಕ್ರಿಯೆಗೆ ಜಿಲ್ಲಾ ಆರೋಗ್ಯಾಧಿಕಾರಿ ಸಿಗುತ್ತಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ, ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್!

ವೀರ್ ಸಾವರ್ಕರ್‌ಗೆ 'ಭಾರತ ರತ್ನ' ನೀಡಿದರೆ, ಪ್ರಶಸ್ತಿಯ ಘನತೆ ಮತ್ತಷ್ಟು ಹೆಚ್ಚುತ್ತದೆ: ಮೋಹನ್ ಭಾಗವತ್

ಅಮೆರಿಕ-ಭಾರತ ನಡುವಿನ ವ್ಯಾಪಾರ ಒಪ್ಪಂದ: 72 ಕೋಟಿ ರೈತರ ಪಾಲಿಗೆ ಮರಣಶಾಸನ - ಸಿಎಂ ಸಿದ್ದರಾಮಯ್ಯ

ನಟರಿಗೆ ನಿರ್ಮಾಪಕರಿಂದ ಕಾಂಡೋಮ್ ಸಪ್ಲೈ ಹೇಳಿಕೆ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ FIR ದಾಖಲು

T20 ವಿಶ್ವಕಪ್ 2026: ICC ಪತ್ರಕ್ಕೆ ಬಾಲ ಮುದುರಿಕೊಂಡ ಪಾಕ್, ಯು-ಟರ್ನ್!

SCROLL FOR NEXT