ರಾಜ್ಯ

ನಾನು ಉಪೇಂದ್ರ....ಈ ರಾಜ್ಯದ ಮುಖ್ಯಮಂತ್ರಿ ಆಗ್ಬೇಕು!

Nagaraja AB

ಬೆಂಗಳೂರು: ನಾನು ಉಪೇಂದ್ರ...ಈ ರಾಜ್ಯದ ಮುಖ್ಯಮಂತ್ರಿ ಆಗ್ಬೇಕು. ಚುನಾವಣೆಯಲ್ಲಿ ಸ್ಪರ್ಧಿಸಿದರೆ? ನೀವು ನನ್ನನ್ನು ಗೆಲ್ತಿಸ್ತೀರಾ? ಎಂದು ರಿಯಲ್ ಸ್ಟಾರ್  ಉಪೇಂದ್ರ ಜನರನ್ನು ಕೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಉಪೇಂದ್ರ,,ಸಮಾಜ ಸೇವೆ ಮಾಡ್ತಿದ್ದೀನಿ. ರೈತರಿಂದ  ಬೆಳೆ ಕೊಂಡು ಉಚಿತವಾಗಿ ಕಷ್ಟದಲ್ಲಿರೋರಿಗೆ ಹಂಚಿದ್ತಿನಿ. ಚುನಾವಣೆ ಸಮಯದಲ್ಲಿ ಹೋರಾಟಾನೂ ಮಾಡ್ತೀನಿ. ಆಡಳಿತ, ವಿಪಕ್ಷ ಜನರಿಗೆ ಏನೂ ಮಾಡ್ದೆ ಸಂಪೂರ್ಣ ವಿಫಲ ಆಗಿದೆ ಅಂತಾ ಮಾಧ್ಯಮದಲ್ಲಿ ಕೂಗಿ ಹೇಳ್ತಿನಿ. ಇವರನೆಲ್ಲಾ ಕಿತ್ತಾಕಿ ನನಗೆ ಒಂದು ಅವಕಾಶ ಕೊಡಿ. 

ನಿಮ್ಮ ಮುಂದಿನ ಉಜ್ವಲ ಭವಿಷ್ಯಕ್ಕೆ ಕೆಲಸ ಮಾಡ್ತಿನಿ. ಹಗಲು ರಾತ್ರಿ  ಕಷ್ಟಪಟ್ಟು ಸುವರ್ಣ ಕರ್ನಾಟಕ ಮಾಡ್ತೀನಿ. ನನ್ನನ್ನು ಗೆಲ್ತಿಸ್ತೀರಾ? ಎಂದು ಕೇಳಿಕೊಂಡಿದ್ದಾರೆ.

SCROLL FOR NEXT