ಕಮಲ್ ಪಂಥ್ 
ರಾಜ್ಯ

ಖುದ್ದು ರಸ್ತೆಗಿಳಿದ ಪೊಲೀಸ್ ಆಯುಕ್ತ​​ ಕಮಲ್​ ಪಂತ್; ಬೆಂಗಳೂರಿನಲ್ಲಿ 3 ಗಂಟೆಯಲ್ಲೆ 1500 ವಾಹನ ಜಪ್ತಿ!

ಕೊರೊನಾ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್​​ಡೌನ್ ಜಾರಿಗೊಳಿಸಿದ್ದು, ಲಾಕ್​​ಡೌನ್​ ಯಶಸ್ವಿಗೊಳಿಸಲು ಖುದ್ದು ನಗರ ಪೊಲೀಸ್​ ಆಯುಕ್ತ​ ಕಮಲ್​​​ ಪಂತ್ ಅವರೇ ರಸ್ತೆಗೆ ಇಳಿದು ವಾಹನಗಳನ್ನು ಪರಿಶೀಲನೆ ನಡೆಸಿದರು.

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್​​ಡೌನ್ ಜಾರಿಗೊಳಿಸಿದ್ದು, ಲಾಕ್​​ಡೌನ್​ ಯಶಸ್ವಿಗೊಳಿಸಲು ಖುದ್ದು ನಗರ ಪೊಲೀಸ್​ ಆಯುಕ್ತ​ ಕಮಲ್​​​ ಪಂತ್ ಅವರೇ ರಸ್ತೆಗೆ ಇಳಿದು ವಾಹನಗಳನ್ನು ಪರಿಶೀಲನೆ ನಡೆಸಿದರು.

ನಗರದ ಕೆಆರ್​ ಸರ್ಕಲ್​​, ನೃಪತುಂಗ ರಸ್ತೆ, ಕೆಆರ್​ ಮಾರುಕಟ್ಟೆ ಸೇರಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದ ಆಯುಕ್ತರು, ಬೆಳಗ್ಗೆ 10 ಗಂಟೆಯ ನಂತರವೂ ಅನಗತ್ಯವಾಗಿ ರಸ್ತೆಗೆ ಇಳಿದಿದ್ದ ವಾಹನ ಸವಾರರನ್ನು ಪರಿಶೀಲನೆ ನಡೆಸಿದರು. ಈ ವೇಳೆ ಜಾಲಿ ರೈಡ್ ಮಾಡಿಕೊಂಡು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ   ಯುವಕನೋರ್ವನನ್ನು ತಡೆದು ಪ್ರಶ್ನಿಸಿದ ಆಯುಕ್ತರು, ಸವಾರನ ದಾಖಲೆ ಪರಿಶೀಲನೆ ನಡೆಸಿ ಅನಗತ್ಯವಾಗಿ ರಸ್ತೆ​​ಗೆ ಇಳಿದಿದ್ದನ್ನು ಖಚಿತ ಪಡಿಸಿಕೊಂಡು ತಕ್ಷಣವೇ ಸ್ಥಳೀಯ ಪೊಲೀಸ್​ ಸಿಬ್ಬಂದಿಯನ್ನು ಕರೆದು ಯುವಕನನ್ನು ವಶಕ್ಕೆ ಪಡೆಯಲು ಸೂಚಿಸಿದರು.

ಲಾಕ್ ಡೌನ್ ಉಲ್ಲಂಘನೆ- ನಗರದಲ್ಲಿ 1,500 ವಾಹನ ಜಪ್ತಿ: ಕಮಲ್ ಪಂತ್
ನಗರದಲ್ಲಿ ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಬರೊಬ್ಬರಿ 1,500 ವಾಹನಳನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯುಕ್ತರು, ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಂದ 1,500 ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದ್ದು, ಕೆಲ ಚಾಲಕರನ್ನು ವಶಕ್ಕೆ ಪಡೆಯಲಾಗಿದೆ. 

ಅನಗತ್ಯವಾಗಿ ಓಡಾಡುತ್ತಿದ್ದವರ ಮೇಲೂ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದರು.ನಗರದಲ್ಲಿ ಹೋಟೆಲ್, ಮಾಲ್ ಸೇರಿ ಯಾವೊಂದು ಅಂಗಡಿಗಳು ಓಪನ್ ಇಲ್ಲ. ಬಹುತೇಕ ಎಲ್ಲಾ ಕಡೆ ಜನರಿಂದ ಉತ್ತಮ ಸಹಕಾರ ದೊರಕುತ್ತಿದೆ.ಜನ ಸಹಕರಿಸಿದಾಗ ಮಾತ್ರ ಲಾಕ್ ಡೌನ್ ಯಶಸ್ವಿಯಾಗಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT