ಕಮಲ್ ಪಂಥ್ 
ರಾಜ್ಯ

ಖುದ್ದು ರಸ್ತೆಗಿಳಿದ ಪೊಲೀಸ್ ಆಯುಕ್ತ​​ ಕಮಲ್​ ಪಂತ್; ಬೆಂಗಳೂರಿನಲ್ಲಿ 3 ಗಂಟೆಯಲ್ಲೆ 1500 ವಾಹನ ಜಪ್ತಿ!

ಕೊರೊನಾ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್​​ಡೌನ್ ಜಾರಿಗೊಳಿಸಿದ್ದು, ಲಾಕ್​​ಡೌನ್​ ಯಶಸ್ವಿಗೊಳಿಸಲು ಖುದ್ದು ನಗರ ಪೊಲೀಸ್​ ಆಯುಕ್ತ​ ಕಮಲ್​​​ ಪಂತ್ ಅವರೇ ರಸ್ತೆಗೆ ಇಳಿದು ವಾಹನಗಳನ್ನು ಪರಿಶೀಲನೆ ನಡೆಸಿದರು.

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್​​ಡೌನ್ ಜಾರಿಗೊಳಿಸಿದ್ದು, ಲಾಕ್​​ಡೌನ್​ ಯಶಸ್ವಿಗೊಳಿಸಲು ಖುದ್ದು ನಗರ ಪೊಲೀಸ್​ ಆಯುಕ್ತ​ ಕಮಲ್​​​ ಪಂತ್ ಅವರೇ ರಸ್ತೆಗೆ ಇಳಿದು ವಾಹನಗಳನ್ನು ಪರಿಶೀಲನೆ ನಡೆಸಿದರು.

ನಗರದ ಕೆಆರ್​ ಸರ್ಕಲ್​​, ನೃಪತುಂಗ ರಸ್ತೆ, ಕೆಆರ್​ ಮಾರುಕಟ್ಟೆ ಸೇರಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದ ಆಯುಕ್ತರು, ಬೆಳಗ್ಗೆ 10 ಗಂಟೆಯ ನಂತರವೂ ಅನಗತ್ಯವಾಗಿ ರಸ್ತೆಗೆ ಇಳಿದಿದ್ದ ವಾಹನ ಸವಾರರನ್ನು ಪರಿಶೀಲನೆ ನಡೆಸಿದರು. ಈ ವೇಳೆ ಜಾಲಿ ರೈಡ್ ಮಾಡಿಕೊಂಡು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ   ಯುವಕನೋರ್ವನನ್ನು ತಡೆದು ಪ್ರಶ್ನಿಸಿದ ಆಯುಕ್ತರು, ಸವಾರನ ದಾಖಲೆ ಪರಿಶೀಲನೆ ನಡೆಸಿ ಅನಗತ್ಯವಾಗಿ ರಸ್ತೆ​​ಗೆ ಇಳಿದಿದ್ದನ್ನು ಖಚಿತ ಪಡಿಸಿಕೊಂಡು ತಕ್ಷಣವೇ ಸ್ಥಳೀಯ ಪೊಲೀಸ್​ ಸಿಬ್ಬಂದಿಯನ್ನು ಕರೆದು ಯುವಕನನ್ನು ವಶಕ್ಕೆ ಪಡೆಯಲು ಸೂಚಿಸಿದರು.

ಲಾಕ್ ಡೌನ್ ಉಲ್ಲಂಘನೆ- ನಗರದಲ್ಲಿ 1,500 ವಾಹನ ಜಪ್ತಿ: ಕಮಲ್ ಪಂತ್
ನಗರದಲ್ಲಿ ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಬರೊಬ್ಬರಿ 1,500 ವಾಹನಳನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯುಕ್ತರು, ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಂದ 1,500 ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದ್ದು, ಕೆಲ ಚಾಲಕರನ್ನು ವಶಕ್ಕೆ ಪಡೆಯಲಾಗಿದೆ. 

ಅನಗತ್ಯವಾಗಿ ಓಡಾಡುತ್ತಿದ್ದವರ ಮೇಲೂ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದರು.ನಗರದಲ್ಲಿ ಹೋಟೆಲ್, ಮಾಲ್ ಸೇರಿ ಯಾವೊಂದು ಅಂಗಡಿಗಳು ಓಪನ್ ಇಲ್ಲ. ಬಹುತೇಕ ಎಲ್ಲಾ ಕಡೆ ಜನರಿಂದ ಉತ್ತಮ ಸಹಕಾರ ದೊರಕುತ್ತಿದೆ.ಜನ ಸಹಕರಿಸಿದಾಗ ಮಾತ್ರ ಲಾಕ್ ಡೌನ್ ಯಶಸ್ವಿಯಾಗಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT