ಕಮಲ್ ಪಂಥ್ 
ರಾಜ್ಯ

ಖುದ್ದು ರಸ್ತೆಗಿಳಿದ ಪೊಲೀಸ್ ಆಯುಕ್ತ​​ ಕಮಲ್​ ಪಂತ್; ಬೆಂಗಳೂರಿನಲ್ಲಿ 3 ಗಂಟೆಯಲ್ಲೆ 1500 ವಾಹನ ಜಪ್ತಿ!

ಕೊರೊನಾ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್​​ಡೌನ್ ಜಾರಿಗೊಳಿಸಿದ್ದು, ಲಾಕ್​​ಡೌನ್​ ಯಶಸ್ವಿಗೊಳಿಸಲು ಖುದ್ದು ನಗರ ಪೊಲೀಸ್​ ಆಯುಕ್ತ​ ಕಮಲ್​​​ ಪಂತ್ ಅವರೇ ರಸ್ತೆಗೆ ಇಳಿದು ವಾಹನಗಳನ್ನು ಪರಿಶೀಲನೆ ನಡೆಸಿದರು.

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್​​ಡೌನ್ ಜಾರಿಗೊಳಿಸಿದ್ದು, ಲಾಕ್​​ಡೌನ್​ ಯಶಸ್ವಿಗೊಳಿಸಲು ಖುದ್ದು ನಗರ ಪೊಲೀಸ್​ ಆಯುಕ್ತ​ ಕಮಲ್​​​ ಪಂತ್ ಅವರೇ ರಸ್ತೆಗೆ ಇಳಿದು ವಾಹನಗಳನ್ನು ಪರಿಶೀಲನೆ ನಡೆಸಿದರು.

ನಗರದ ಕೆಆರ್​ ಸರ್ಕಲ್​​, ನೃಪತುಂಗ ರಸ್ತೆ, ಕೆಆರ್​ ಮಾರುಕಟ್ಟೆ ಸೇರಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದ ಆಯುಕ್ತರು, ಬೆಳಗ್ಗೆ 10 ಗಂಟೆಯ ನಂತರವೂ ಅನಗತ್ಯವಾಗಿ ರಸ್ತೆಗೆ ಇಳಿದಿದ್ದ ವಾಹನ ಸವಾರರನ್ನು ಪರಿಶೀಲನೆ ನಡೆಸಿದರು. ಈ ವೇಳೆ ಜಾಲಿ ರೈಡ್ ಮಾಡಿಕೊಂಡು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ   ಯುವಕನೋರ್ವನನ್ನು ತಡೆದು ಪ್ರಶ್ನಿಸಿದ ಆಯುಕ್ತರು, ಸವಾರನ ದಾಖಲೆ ಪರಿಶೀಲನೆ ನಡೆಸಿ ಅನಗತ್ಯವಾಗಿ ರಸ್ತೆ​​ಗೆ ಇಳಿದಿದ್ದನ್ನು ಖಚಿತ ಪಡಿಸಿಕೊಂಡು ತಕ್ಷಣವೇ ಸ್ಥಳೀಯ ಪೊಲೀಸ್​ ಸಿಬ್ಬಂದಿಯನ್ನು ಕರೆದು ಯುವಕನನ್ನು ವಶಕ್ಕೆ ಪಡೆಯಲು ಸೂಚಿಸಿದರು.

ಲಾಕ್ ಡೌನ್ ಉಲ್ಲಂಘನೆ- ನಗರದಲ್ಲಿ 1,500 ವಾಹನ ಜಪ್ತಿ: ಕಮಲ್ ಪಂತ್
ನಗರದಲ್ಲಿ ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಬರೊಬ್ಬರಿ 1,500 ವಾಹನಳನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯುಕ್ತರು, ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಂದ 1,500 ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದ್ದು, ಕೆಲ ಚಾಲಕರನ್ನು ವಶಕ್ಕೆ ಪಡೆಯಲಾಗಿದೆ. 

ಅನಗತ್ಯವಾಗಿ ಓಡಾಡುತ್ತಿದ್ದವರ ಮೇಲೂ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದರು.ನಗರದಲ್ಲಿ ಹೋಟೆಲ್, ಮಾಲ್ ಸೇರಿ ಯಾವೊಂದು ಅಂಗಡಿಗಳು ಓಪನ್ ಇಲ್ಲ. ಬಹುತೇಕ ಎಲ್ಲಾ ಕಡೆ ಜನರಿಂದ ಉತ್ತಮ ಸಹಕಾರ ದೊರಕುತ್ತಿದೆ.ಜನ ಸಹಕರಿಸಿದಾಗ ಮಾತ್ರ ಲಾಕ್ ಡೌನ್ ಯಶಸ್ವಿಯಾಗಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!