ಶಿಲೀಂಧ್ರ ಸೋಂಕಿಗೆ ತುತ್ತಾದ ರೋಗಿಯೊಬ್ಬರಿಗೆ ಮಧ್ಯ ಪ್ರದೇಶದ ಜಬಲ್ಪುರ್ ನಲ್ಲಿ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವುದು 
ರಾಜ್ಯ

ಕರ್ನಾಟಕದಲ್ಲಿ ಇದುವರೆಗೆ ವೈಟ್ ಫಂಗಸ್ ಪತ್ತೆಯಾಗಿಲ್ಲ: ವೈದ್ಯರು

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ಇತ್ತೀಚೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದರ ಮಧ್ಯೆ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ ವೈಟ್ ಫಂಗಸ್ (ಬಿಳಿ ಶಿಲೀಂಧ್ರಕ) ಪತ್ತೆಯಾಗಿದೆ. ಕರ್ನಾಟದಲ್ಲಿ ಇದುವರೆಗೆ ಬಿಳಿ ಶಿಲೀಂಧ್ರಕ ವರದಿಯಾಗಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ಇತ್ತೀಚೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದರ ಮಧ್ಯೆ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ ವೈಟ್ ಫಂಗಸ್ (ಬಿಳಿ ಶಿಲೀಂಧ್ರಕ) ಪತ್ತೆಯಾಗಿದೆ. ಕರ್ನಾಟದಲ್ಲಿ ಇದುವರೆಗೆ ಬಿಳಿ ಶಿಲೀಂಧ್ರಕ ವರದಿಯಾಗಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.

ಕೋವಿಡ್ ಸೋಂಕು ಉಲ್ಭಣವಾಗಿ ಐಸಿಯುನಲ್ಲಿ ದಾಖಲಾಗಿ ಬಿಡುಗಡೆ ಹೊಂದಿ ಬಂದವರಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ಉಂಟಾಗುತ್ತಿದೆ. ಮ್ಯುಕೊರ್ಮಿಕೊಸಿಸ್ ನ್ನು ಬ್ಲ್ಯಾಕ್ ಫಂಗಸ್ ಎಂದು ಕರೆಯಲಾಗುತ್ತಿದ್ದು ಇತರ ಶಿಲೀಂಧ್ರಗಳ ಸೋಂಕುಗಳು, ಉದಾಹರಣೆಗೆ, ಬಾಹ್ಯ ಮತ್ತು ಆಕ್ರಮಣಕಾರಿ ಕ್ಯಾಂಡಿಡಿಯಾಸಿಸ್, ಆಕ್ರಮಣಕಾರಿ ಆಸ್ಪರ್ಜಿಲೊಸಿಸ್, ಇತ್ಯಾದಿಗಳನ್ನು ಈಗ ‘ಬಿಳಿ ಶಿಲೀಂಧ್ರ’ ಎಂದು ಕರೆಯಲಾಗುತ್ತದೆ.

ರೋಗನಿರೋಧಕ ಶಕ್ತಿ, ಕ್ಯಾನ್ಸರ್ ಮತ್ತು ಅಂಗಾಂಗ ಕಸಿಗೆ ಒಳಗಾದ ರೋಗಿಗಳಲ್ಲಿ ನಾವು ಅವುಗಳನ್ನು ನೋಡುತ್ತಿದ್ದರೂ, ಸ್ಟೀರಾಯ್ಡ್ ಗಳ ವ್ಯಾಪಕ ಬಳಕೆಯಿಂದಾಗಿ ಕೋವಿಡ್ ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಈ ಸೋಂಕುಗಳ ಹಠಾತ್ ಏರಿಕೆ ಕಂಡುಬರುತ್ತಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

ನೈರ್ಮಲ್ಯ ಸೇರಿದಂತೆ ಇತರ ಅಂಶಗಳು ಸಹ ಫಂಗಸ್ ಗೆ ಕಾರಣವಾಗಬಹುದು. ಈ ಸೋಂಕುಗಳಿಗೆ ಸಾಮಾನ್ಯವಾಗಿ ಚಿಕಿತ್ಸೆ ನೀಡುವುದು ಕಷ್ಟ. ‘ಗುಣಪಡಿಸುವುದಕ್ಕಿಂತ ತಡೆಗಟ್ಟುವುದು ಉತ್ತಮ’ ಎಂಬ ಗಾದೆ ಮಾತಿನಂತೆ ಸಾಧ್ಯವಾದಷ್ಟು ಬ್ಲ್ಯಾಕ್ ಫಂಗಸ್ ಬರದಂತೆ ನೋಡಿಕೊಳ್ಳುವುದೇ ಇದಕ್ಕೆ ಪರಿಹಾರವಾಗಿದೆ ಎನ್ನುತ್ತಾರೆ ಮಣಿಪಾಲ ವಿಶ್ವವಿದ್ಯಾಲಯದ ಡಾ ಟಿಎಂಎ ಪೈ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಹಾಗೂ ಪ್ರೊಫೆಸರ್ ಶಶಿಕಿರಣ ಉಮಾಕಾಂತ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT