ಶಿಲೀಂಧ್ರ ಸೋಂಕಿಗೆ ತುತ್ತಾದ ರೋಗಿಯೊಬ್ಬರಿಗೆ ಮಧ್ಯ ಪ್ರದೇಶದ ಜಬಲ್ಪುರ್ ನಲ್ಲಿ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವುದು 
ರಾಜ್ಯ

ಕರ್ನಾಟಕದಲ್ಲಿ ಇದುವರೆಗೆ ವೈಟ್ ಫಂಗಸ್ ಪತ್ತೆಯಾಗಿಲ್ಲ: ವೈದ್ಯರು

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ಇತ್ತೀಚೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದರ ಮಧ್ಯೆ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ ವೈಟ್ ಫಂಗಸ್ (ಬಿಳಿ ಶಿಲೀಂಧ್ರಕ) ಪತ್ತೆಯಾಗಿದೆ. ಕರ್ನಾಟದಲ್ಲಿ ಇದುವರೆಗೆ ಬಿಳಿ ಶಿಲೀಂಧ್ರಕ ವರದಿಯಾಗಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ಇತ್ತೀಚೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದರ ಮಧ್ಯೆ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ ವೈಟ್ ಫಂಗಸ್ (ಬಿಳಿ ಶಿಲೀಂಧ್ರಕ) ಪತ್ತೆಯಾಗಿದೆ. ಕರ್ನಾಟದಲ್ಲಿ ಇದುವರೆಗೆ ಬಿಳಿ ಶಿಲೀಂಧ್ರಕ ವರದಿಯಾಗಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.

ಕೋವಿಡ್ ಸೋಂಕು ಉಲ್ಭಣವಾಗಿ ಐಸಿಯುನಲ್ಲಿ ದಾಖಲಾಗಿ ಬಿಡುಗಡೆ ಹೊಂದಿ ಬಂದವರಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ಉಂಟಾಗುತ್ತಿದೆ. ಮ್ಯುಕೊರ್ಮಿಕೊಸಿಸ್ ನ್ನು ಬ್ಲ್ಯಾಕ್ ಫಂಗಸ್ ಎಂದು ಕರೆಯಲಾಗುತ್ತಿದ್ದು ಇತರ ಶಿಲೀಂಧ್ರಗಳ ಸೋಂಕುಗಳು, ಉದಾಹರಣೆಗೆ, ಬಾಹ್ಯ ಮತ್ತು ಆಕ್ರಮಣಕಾರಿ ಕ್ಯಾಂಡಿಡಿಯಾಸಿಸ್, ಆಕ್ರಮಣಕಾರಿ ಆಸ್ಪರ್ಜಿಲೊಸಿಸ್, ಇತ್ಯಾದಿಗಳನ್ನು ಈಗ ‘ಬಿಳಿ ಶಿಲೀಂಧ್ರ’ ಎಂದು ಕರೆಯಲಾಗುತ್ತದೆ.

ರೋಗನಿರೋಧಕ ಶಕ್ತಿ, ಕ್ಯಾನ್ಸರ್ ಮತ್ತು ಅಂಗಾಂಗ ಕಸಿಗೆ ಒಳಗಾದ ರೋಗಿಗಳಲ್ಲಿ ನಾವು ಅವುಗಳನ್ನು ನೋಡುತ್ತಿದ್ದರೂ, ಸ್ಟೀರಾಯ್ಡ್ ಗಳ ವ್ಯಾಪಕ ಬಳಕೆಯಿಂದಾಗಿ ಕೋವಿಡ್ ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಈ ಸೋಂಕುಗಳ ಹಠಾತ್ ಏರಿಕೆ ಕಂಡುಬರುತ್ತಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

ನೈರ್ಮಲ್ಯ ಸೇರಿದಂತೆ ಇತರ ಅಂಶಗಳು ಸಹ ಫಂಗಸ್ ಗೆ ಕಾರಣವಾಗಬಹುದು. ಈ ಸೋಂಕುಗಳಿಗೆ ಸಾಮಾನ್ಯವಾಗಿ ಚಿಕಿತ್ಸೆ ನೀಡುವುದು ಕಷ್ಟ. ‘ಗುಣಪಡಿಸುವುದಕ್ಕಿಂತ ತಡೆಗಟ್ಟುವುದು ಉತ್ತಮ’ ಎಂಬ ಗಾದೆ ಮಾತಿನಂತೆ ಸಾಧ್ಯವಾದಷ್ಟು ಬ್ಲ್ಯಾಕ್ ಫಂಗಸ್ ಬರದಂತೆ ನೋಡಿಕೊಳ್ಳುವುದೇ ಇದಕ್ಕೆ ಪರಿಹಾರವಾಗಿದೆ ಎನ್ನುತ್ತಾರೆ ಮಣಿಪಾಲ ವಿಶ್ವವಿದ್ಯಾಲಯದ ಡಾ ಟಿಎಂಎ ಪೈ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಹಾಗೂ ಪ್ರೊಫೆಸರ್ ಶಶಿಕಿರಣ ಉಮಾಕಾಂತ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದಾಗಲು ಕಾರಣವೇನು?: ತನಿಖೆ ಆರಂಭಿಸಿದ DGCA

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರ, ತಿರುಗೇಟು ನೀಡಲು ಸಿಎಂ ಪ್ರತಿತಂತ್ರ

IPL ಸೇರಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಾಗ; ಸಿಎಂ ಸಿದ್ದರಾಮಯ್ಯ

SCROLL FOR NEXT