ಆರ್.ಅಶೋಕ್ 
ರಾಜ್ಯ

ಕಂದಾಯ ಇಲಾಖೆಯಿಂದ ಕೋವಿಡ್ ನಿಂದ ಮೃತರಾದ 1 ಸಾವಿರ ಮಂದಿ ಅಸ್ಥಿ ವಿಸರ್ಜನೆ: ಆರ್. ಅಶೋಕ್

ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟ ಸುಮಾರು 1 ಸಾವಿರ ಅನಾಥ ಶವಗಳ ಅಸ್ಥಿ ಸರಕಾರದ ಬಳಿ ಇದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. 

ಬೆಂಗಳೂರು: ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟ ಸುಮಾರು 1 ಸಾವಿರ ಅನಾಥ ಶವಗಳ ಅಸ್ಥಿ ಸರಕಾರದ ಬಳಿ ಇದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್ ನಿಂದ ಮೃತಪಟ್ಟವರ ಅಸ್ಥಿ ಸರ್ಕಾರದ ಬಳಿ ಇದೆ. ಅನಿವಾರ್ಯ ಅಥವಾ ಕಷ್ಟದಿಂದಲೋ ಕುಟುಂಬದವರು ಅಸ್ಥಿ ಸ್ವೀಕರಿಸಲು ಮುಂದೆ ಬರುತ್ತಿಲ್ಲ ಎಂದು ಹೇಳಿದ್ದಾರೆ.

ಮೃತರ ಸಂಬಂಧಿಕರು ಮೊಬೈಲ್ ಸ್ವಿಚ್ ಆಫ್ ಇದೆ. ನಾವು ಅಸ್ಥಿ ತೆಗೆದುಕೊಳ್ಳಲು ಮನವಿ ಮಾಡುತ್ತಿದ್ದೇವೆ. ಆದರೆ ಅವರವರ ಕಷ್ಟದಿಂದ ಅಸ್ಥಿ ಪಡೆಯುತ್ತಿಲ್ಲ. ಅಂತಹ ಅಸ್ಥಿಗಳನ್ನು ಸರ್ಕಾರವೇ ವಿಸರ್ಜಿಸಲು ತೀರ್ಮಾನಿಸಿದೆ ಎಂದು ಅಶೋಕ್ ಹೇಳಿದರು. 

ಬಡವ ಬಲ್ಲಿದ ಎಂದು ಭೇದ ಭಾವ ಮಾಡದೇ ಅಸ್ಥಿಗಳನ್ನು ಪಂಚಭೂತಗಳಲ್ಲಿ ಲೀನವಾಗುವಂತೆ ವ್ಯವಸ್ಥೆ ಮಾಡಿದ್ದು, ನೀರಿನಲ್ಲಿ ಸಂಪ್ರದಾಯಬದ್ಧವಾಗಿ ಕಂದಾಯ ಇಲಾಖೆ ವತಿಯಿಂದ ಗೌರವಯುತವಾಗಿ ಸಂಸ್ಕಾರ ಮಾಡಲಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಈಗ ಆಮ್ಲಜನಕಯುಕ್ತ ಹಾಸಿಗೆಗಳು ಅಥವಾ ಆಮ್ಲಜನಕ ಕಾನ್ಸಂಟ್ರೇಟರ್ ಕೊರತೆಯಿಲ್ಲ, ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ಸಹಯೋಗದೊಂದಿಗೆ ವ್ಯವಸ್ಥೆಯನ್ನು ಸುಗಮಗೊಳಿಸಲಾಗಿದೆ ಎಂದು ಅಶೋಕ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT