ಡಾ ಎಂ ಕೆ ಸುದರ್ಶನ್ 
ರಾಜ್ಯ

ಸೋಂಕಿನ ಗುಣಲಕ್ಷಣ ಹೊಂದಿರುವವರ ಮತ್ತು ಅವರ ನಿಕಟವರ್ತಿಗಳ ಪರೀಕ್ಷೆ ಮೇಲೆ ಹೆಚ್ಚು ಒತ್ತು ನೀಡುತ್ತಿರುವುದೇ ಕೊರೋನಾ ಸೋಂಕಿನ ಇಳಿಕೆಗೆ ಕಾರಣ: ಡಾ ಎಂ ಕೆ ಸುದರ್ಶನ್ 

ಕೊರೋನಾ ಸೋಂಕಿನ ಗುಣಲಕ್ಷಣಗಳನ್ನು ಹೊಂದಿರುವ ಜನರನ್ನು ಪರೀಕ್ಷೆ ಮಾಡುವ ಮೇಲೆ ಗಮನ ಕೇಂದ್ರೀಕರಿಸಿರುವುದು ಮತ್ತು ಕೋವಿಡ್ ಪಾಸಿಟಿವ್ ರೋಗಿಗಳಿಂದ ಪ್ರಾಥಮಿಕ ಸಂಪರ್ಕಿತ ಜನರಿಗೆ ಸೋಂಕು ಹರಡುತ್ತಿರುವುದು ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಲು ಕಾರಣ ಎಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ ಎಂ ಕೆ ಸುದರ್ಶನ್ ಹೇಳಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿನ ಗುಣಲಕ್ಷಣಗಳನ್ನು ಹೊಂದಿರುವ ಜನರನ್ನು ಪರೀಕ್ಷೆ ಮಾಡುವ ಮೇಲೆ ಗಮನ ಕೇಂದ್ರೀಕರಿಸಿರುವುದು ಮತ್ತು ಕೋವಿಡ್ ಪಾಸಿಟಿವ್ ರೋಗಿಗಳಿಂದ ಪ್ರಾಥಮಿಕ ಸಂಪರ್ಕಿತ ಜನರಿಗೆ ಸೋಂಕು ಹರಡುತ್ತಿರುವುದು ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಇಳಿಮುಖವಾಗಲು ಕಾರಣ ಎಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ ಎಂ ಕೆ ಸುದರ್ಶನ್ ಹೇಳಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದ್ದು ಈ ತಿಂಗಳಾಂತ್ಯಕ್ಕೆ ಸ್ಥಿರವಾಗುವ ಸಾಧ್ಯತೆಯಿದೆ. 14 ದಿನಗಳ ಲಾಕ್ ಡೌನ್ ನಿಂದ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗಲು ಸಹಾಯವಾಗಬಹುದು, ಪಾಸಿಟಿವ್ ರೋಗಿಗಳ ಸಂಖ್ಯೆ ಕಡಿಮೆಯಾಗಲು ಸಹಾಯವಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆ ರಾಜ್ಯದಲ್ಲಿ 31 ಸಾವಿರದ 183 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದ್ದು 451 ಸಾವು ಸಂಭವಿಸಿದೆ. ದಿನದ ಪಾಸಿಟಿವ್ ದರ ಶೇಕಡಾ 24.21ರಷ್ಟಿದೆ.

ಮೊನ್ನೆ ಮೇ9ರಂದು 14 ದಿನಗಳ ಲಾಕ್ ಡೌನ್ ಘೋಷಿಸುವ ಮೊದಲು ಕರ್ನಾಟಕದಲ್ಲಿ 47 ಸಾವಿರದ 930 ಹೊಸ ಸೋಂಕಿತ ಪ್ರಕರಣಗಳು 490 ಸಾವು ಸಂಭವಿಸಿತ್ತು. ಪಾಸಿಟಿವ್ ದರ ಶೇಕಡಾ 32.71ರಷ್ಟಿತ್ತು. ಈಗ ಮತ್ತೆ ಜೂನ್ 7ಕ್ಕೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಲಾಕ್ ಡೌನ್ ನಿಯಮವನ್ನು ಕಡ್ಡಾಯವಾಗಿ ಜಾರಿಗೆ ತಂದು ಜನರು ಕಟ್ಟುನಿಟ್ಟಾಗಿ ಪಾಲಿಸುವಂತೆ ಡಾ ಸುದರ್ಶನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT