ದುರಂತದ ದೃಶ್ಯ 
ರಾಜ್ಯ

ಉಲ್ಲಾಳ ಬಳಿ ಕಡಲ ದಡಕ್ಕೆ ಅಪ್ಪಳಿಸಿದ ದೋಣಿ: ಹತ್ತು ಮೀನುಗಾರರ ರಕ್ಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ಸಮೀಪದ ಕೋಡಿ ಎಂಬಲ್ಲಿ ಭಾನುವಾರ ಮುಂಜಾನೆ ಮೀನುಗಾರಿಕಾ ದೋಣಿ ಆಕಸ್ಮಿಕವಾಗಿ ದಡಕ್ಕೆ ಅಪ್ಪಳಿಸಿದ್ದು, ನಂತರ ಅದರಲ್ಲಿದ್ದ 10 ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ಸಮೀಪದ ಕೋಡಿ ಎಂಬಲ್ಲಿ ಭಾನುವಾರ ಮುಂಜಾನೆ ಮೀನುಗಾರಿಕಾ ದೋಣಿ ಆಕಸ್ಮಿಕವಾಗಿ ದಡಕ್ಕೆ ಅಪ್ಪಳಿಸಿದ್ದು, ನಂತರ ಅದರಲ್ಲಿದ್ದ 10 ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಮುಂಜಾನೆ 1.30 ಕ್ಕೆ ‘ಅಜಾನ್’ ಎಂಬ ದೋಣಿ ಮಂಗಳೂರು ಹಳೆಯ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ದೋಣಿಯು ಉಲ್ಲಾಳ ಮೂಲದ ಅಶ್ರಫ್ ಮತ್ತು ಫಾರೂಕ್‌ಗೆ ಸೇರಿದ್ದಾಗಿದೆ. ದೋಣಿಯಲ್ಲಿ ಕನ್ಯಾಕುಮಾರಿಯ ಐವರು ಸೇರಿದಂತೆ 10 ಮೀನುಗಾರರು ಇದ್ದು, ಅವರಲ್ಲಿ ಕೆಲವರು ಪಾನಮತ್ತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದೋಣಿಯ ಕ್ಯಾಪ್ಟನ್ ಸಮುದ್ರದ ಮಧ್ಯೆ ದೋಣಿಯನ್ನು ಮತ್ತೊಬ್ಬ ಮೀನುಗಾರನಿಗೆ ಹಸ್ತಾಂತರಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ದೋಣಿ ದಡಕ್ಕೆ ಅಪ್ಪಳಿಸಿದ ನಂತರ ಕೆಲ ಮೀನುಗಾರರು ವಾಂತಿ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಉಲ್ಲಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT