ದುರಂತದ ದೃಶ್ಯ 
ರಾಜ್ಯ

ಉಲ್ಲಾಳ ಬಳಿ ಕಡಲ ದಡಕ್ಕೆ ಅಪ್ಪಳಿಸಿದ ದೋಣಿ: ಹತ್ತು ಮೀನುಗಾರರ ರಕ್ಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ಸಮೀಪದ ಕೋಡಿ ಎಂಬಲ್ಲಿ ಭಾನುವಾರ ಮುಂಜಾನೆ ಮೀನುಗಾರಿಕಾ ದೋಣಿ ಆಕಸ್ಮಿಕವಾಗಿ ದಡಕ್ಕೆ ಅಪ್ಪಳಿಸಿದ್ದು, ನಂತರ ಅದರಲ್ಲಿದ್ದ 10 ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ಸಮೀಪದ ಕೋಡಿ ಎಂಬಲ್ಲಿ ಭಾನುವಾರ ಮುಂಜಾನೆ ಮೀನುಗಾರಿಕಾ ದೋಣಿ ಆಕಸ್ಮಿಕವಾಗಿ ದಡಕ್ಕೆ ಅಪ್ಪಳಿಸಿದ್ದು, ನಂತರ ಅದರಲ್ಲಿದ್ದ 10 ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಮುಂಜಾನೆ 1.30 ಕ್ಕೆ ‘ಅಜಾನ್’ ಎಂಬ ದೋಣಿ ಮಂಗಳೂರು ಹಳೆಯ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ದೋಣಿಯು ಉಲ್ಲಾಳ ಮೂಲದ ಅಶ್ರಫ್ ಮತ್ತು ಫಾರೂಕ್‌ಗೆ ಸೇರಿದ್ದಾಗಿದೆ. ದೋಣಿಯಲ್ಲಿ ಕನ್ಯಾಕುಮಾರಿಯ ಐವರು ಸೇರಿದಂತೆ 10 ಮೀನುಗಾರರು ಇದ್ದು, ಅವರಲ್ಲಿ ಕೆಲವರು ಪಾನಮತ್ತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದೋಣಿಯ ಕ್ಯಾಪ್ಟನ್ ಸಮುದ್ರದ ಮಧ್ಯೆ ದೋಣಿಯನ್ನು ಮತ್ತೊಬ್ಬ ಮೀನುಗಾರನಿಗೆ ಹಸ್ತಾಂತರಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ದೋಣಿ ದಡಕ್ಕೆ ಅಪ್ಪಳಿಸಿದ ನಂತರ ಕೆಲ ಮೀನುಗಾರರು ವಾಂತಿ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಉಲ್ಲಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT