ಆಕ್ಸಿಜನ್ ಎಕ್ಸ್ ಪ್ರೆಸ್ 
ರಾಜ್ಯ

ಬೆಂಗಳೂರಿಗೆ ಆಮ್ಲಜನಕ ಹೊತ್ತ 9ನೇ ರೈಲು ಆಗಮನ

ಜಾರ್ಖಂಡ್ ನ ಟಾಟಾ ನಗರದಿಂದ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು ಹೊತ್ತ 9ನೇ ಆಕ್ಸಿಜನ್  ಎಕ್ಸ್ ಪ್ರೆಸ್ ರೈಲು ಭಾನುವಾರ ನಗರದ ವೈಟ್ ಫೀಲ್ಡ್ ತಲುಪಿದೆ.

ಬೆಂಗಳೂರು: ಜಾರ್ಖಂಡ್ ನ ಟಾಟಾ ನಗರದಿಂದ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು ಹೊತ್ತ 9ನೇ ಆಕ್ಸಿಜನ್  ಎಕ್ಸ್ ಪ್ರೆಸ್ ರೈಲು ಭಾನುವಾರ ನಗರದ ವೈಟ್ ಫೀಲ್ಡ್ ತಲುಪಿದೆ.

ಆಕ್ಸಿಜನ್  ಎಕ್ಸ್ ಪ್ರೆಸ್ ನ ತ್ವರಿತ ಸಂಚಾರ ಸುಗಮಗೊಳಿಸಲು ರೈಲ್ವೆ ಸಿಗ್ನಲ್ ಮುಕ್ತ 'ಗ್ರೀನ್ ಕಾರಿಡಾರ್' ಅನ್ನು ರೈಲ್ವೆ ರೂಪಿಸಿದೆ. ಈ ರೈಲು 120 ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು  6 ಕ್ರಯೋಜೆನಿಕ್ ಕಂಟೈನರ್ ಗಳಲ್ಲಿ ಹೊತ್ತು ತಂದಿದೆ. ಪ್ರತಿ ಕ್ರಯೋಜೆನಿಕ್ ಕಂಟೇನರ್ 20 ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕ ಹೊಂದಿದೆ.

ಈವರೆಗೆ ಕರ್ನಾಟಕಕ್ಕೆ 1062.14 ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು ಆಕ್ಸಿಜನ್  ಎಕ್ಸ್  ಪ್ರೆಸ್  ಮೂಲಕ ಸಾಗಿಸಲಾಗಿದೆ. 

ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರಗಳಿಗೆ ನೆರವಾಗಲು ಭಾರತೀಯ ರೈಲ್ವೆ ಈವರೆಗೆ 224 ರೈಲುಗಳಲ್ಲಿ 884 ಟ್ಯಾಂಕರ್ ಗಳ ಮೂಲಕ ಸುಮಾರು 14,500 ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು ವಿವಿಧ ರಾಜ್ಯಗಳಿಗೆ ಸಾಗಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT