ಸಂಗ್ರಹ ಚಿತ್ರ 
ರಾಜ್ಯ

ಮಗನ ಅಂತ್ಯಕ್ರಿಯೆ ವೇಳೆ ಕೊರೋನಾ ಸೋಂಕು ಪೀಡಿತ ತಂದೆ ಸಾವು!

ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕೋವಿಡ್-19 ಸೋಂಕು ಪೀಡಿತ ತಂದೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ.

ಮಡಿಕೇರಿ: ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕೋವಿಡ್-19 ಸೋಂಕು ಪೀಡಿತ ತಂದೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ.

ಕೊಡಗಿನ ಗೋಣಿಕೊಪ್ಪದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಸಾವಿಗೀಡಾಗಿದ್ದ ವಿಕತಚೇತನ ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ತಂದೆ ರಾಜನ್ (70ವರ್ಷ) ಕೂಡ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿದ್ದ 37 ವರ್ಷದ ವಿಕಲಚೇತನ ಸಜೇಶ್ ನನ್ನು ಗೋಣಿಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದ. ಭಾನುವಾರ ಅಂತ್ಯಕ್ರಿಯೆ ನಡೆದಿತ್ತು. ಆದರೆ ಈ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ತಂದೆ ರಾಜನ್ ಇದ್ದಕ್ಕಿದ್ದ ಹಾಗೇ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆ ಸಾಗಿಸಲು ಪ್ರಯತ್ನಿಸಲಾಯಿತಾದರೂ ಅವರು ಮಾರ್ಗ ಮಧ್ಯೆ ಸಾವನ್ನಪ್ಪಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ತಂದು ಕೋವಿಡ್ ಪರೀಕ್ಷೆ ನಡೆಸಿದಾಗ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. 

ಅಂತೆಯೇ ರಾಜನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದೀಗ ರಾಜನ್ ಅವರ ಅಂತ್ಯಕ್ರಿಯೆಯನ್ನು ಕೋವಿಡ್ ಮಾರ್ಗಸೂಚಿ ನಿರ್ಬಂಧಗಳೊಂದಿಗೆ ನೆರವೇರಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT