ಸಂಗ್ರಹ ಚಿತ್ರ 
ರಾಜ್ಯ

ಮಗನ ಅಂತ್ಯಕ್ರಿಯೆ ವೇಳೆ ಕೊರೋನಾ ಸೋಂಕು ಪೀಡಿತ ತಂದೆ ಸಾವು!

ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕೋವಿಡ್-19 ಸೋಂಕು ಪೀಡಿತ ತಂದೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ.

ಮಡಿಕೇರಿ: ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕೋವಿಡ್-19 ಸೋಂಕು ಪೀಡಿತ ತಂದೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ.

ಕೊಡಗಿನ ಗೋಣಿಕೊಪ್ಪದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಸಾವಿಗೀಡಾಗಿದ್ದ ವಿಕತಚೇತನ ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ತಂದೆ ರಾಜನ್ (70ವರ್ಷ) ಕೂಡ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿದ್ದ 37 ವರ್ಷದ ವಿಕಲಚೇತನ ಸಜೇಶ್ ನನ್ನು ಗೋಣಿಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದ. ಭಾನುವಾರ ಅಂತ್ಯಕ್ರಿಯೆ ನಡೆದಿತ್ತು. ಆದರೆ ಈ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ತಂದೆ ರಾಜನ್ ಇದ್ದಕ್ಕಿದ್ದ ಹಾಗೇ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆ ಸಾಗಿಸಲು ಪ್ರಯತ್ನಿಸಲಾಯಿತಾದರೂ ಅವರು ಮಾರ್ಗ ಮಧ್ಯೆ ಸಾವನ್ನಪ್ಪಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ತಂದು ಕೋವಿಡ್ ಪರೀಕ್ಷೆ ನಡೆಸಿದಾಗ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. 

ಅಂತೆಯೇ ರಾಜನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದೀಗ ರಾಜನ್ ಅವರ ಅಂತ್ಯಕ್ರಿಯೆಯನ್ನು ಕೋವಿಡ್ ಮಾರ್ಗಸೂಚಿ ನಿರ್ಬಂಧಗಳೊಂದಿಗೆ ನೆರವೇರಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT