ರಾಜ್ಯ

ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Raghavendra Adiga

ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಪ್ರಭಾವಿ ವ್ಯಕ್ತಿಯಾಗಿರುವ ವಿನಯ್ ಕುಲಕರ್ಣಿ ಜಾಮೀನು ಸಿಕ್ಕರೆ ಸಾಕ್ಷ್ಯಾಧಾರ ನಾಶಪಡಿಸುವ ಸಾಧ್ಯತೆ ಇದೆ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣವನ್ನು ಸಿಬಿಐ ವಿಚಾರಣೆ ನಡೆಸಿದ್ದು ಇದಾಗಲೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಪ್ರಕರಣದ ಸಂಬಂಧ ಸಿಬಿಐ ಕಳೆದ ವರ್ಷ ನವೆಂಬರ್ ನಲ್ಲಿ ವಿನಯ್ ಕುಲಕರ್ಣಿಯವರನ್ನು ಬಂಧಿಸಿದೆ. ಅವರೀಗ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.

SCROLL FOR NEXT