ನಿಯಮ ಉಲ್ಲಂಘಿಸಿದವರಿಗೆ ಸನ್ಮಾನ ಮಾಡುತ್ತಿರುವ ಪೊಲೀಸರು 
ರಾಜ್ಯ

ಕೊರೋನಾ ಲಾಕ್ಡೌನ್ ನಿಯಮ ಉಲ್ಲಂಘಿಸಿದವರಿಗೆ ಹಾರ ಹಾಕಿ, ಮಂಗಳಾರತಿ ಮಾಡಿದ ಪೊಲೀಸರು!

ಮಹಾಮಾರಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಿರುವ ಸೆಮಿ ಲಾಕ್ಡೌನ್ ವೇಳೆ ನಿಯಮ ಉಲ್ಲಂಘಿಸಿದ ಜನರಿಗೆ ರಾಜಧಾನಿ ಪೊಲೀಸರು ಹಾರ ಹಾಕಿ, ಮಂಗಳಾರತಿ ಮಾಡಿ ಸನ್ಮಾನ ಮಾಡಿದ್ದಾರೆ.

ಬೆಂಗಳೂರು: ಮಹಾಮಾರಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಿರುವ ಸೆಮಿ ಲಾಕ್ಡೌನ್ ವೇಳೆ ನಿಯಮ ಉಲ್ಲಂಘಿಸಿದ ಜನರಿಗೆ ರಾಜಧಾನಿ ಪೊಲೀಸರು ಹಾರ ಹಾಕಿ, ಮಂಗಳಾರತಿ ಮಾಡಿ ಸನ್ಮಾನ ಮಾಡಿದ್ದಾರೆ. 

ನಗರದ ಮಾದನಾಯಕನಹಳ್ಳಿ ಪೊಲೀಸರು ನಿಯಮ ಉಲ್ಲಂಘಿಸಿ ಹೊರಬಂದವರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಈ ವೇಳೆ ಬೈಕ್ ಸವಾರರಿಗೆ ಹಾರಹಾಕಿ, ಮಂಗಳಾರತಿ ಮಾಡಿದ್ದಾರೆ. 

ನಿನ್ನೆ ಬೆಳಿಗ್ಗೆ 10.30 ರಿಂದ ವಾಹನ ತಪಾಸಣೆ ಆರಂಭಿಸಲಾಗಿತ್ತು. ಈ ವೇಳೆ ಆಟೋ, ದ್ವಿಚಕ್ರ ವಾಹನ ಸೇರಿದಂತೆ ಒಂದೇ ದಿನ 30ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ವೈದ್ಯಕೀಯ ತುರ್ತು ಕೆಲಸಗಳಿಗೆ ಹೋಗುತ್ತಿದ್ದವರಿಗೆ ಚಲಿಸಲು ಅನುಮತಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ನಮ್ಮ ಸಿಬ್ಬಂದಿಗಳು ಲಾಕ್ಡೌನ್ ನಿಯಮಗ ಉಲ್ಲಂಘಿಸಿದವರಿಗೆ ಸನ್ಮಾನ ಮಾಡಲು 25 ಹೂವಿನ ಹಾರಗಳನ್ನು ತಂದಿದ್ದರು. ಈ ಮೂಲಕ ವಾಹನ ವಶಕ್ಕೆ ಪಡೆದು, ನಿಯಮ ಉಲ್ಲಂಘಿಸಿದವರಿಗೆ ವಿಶೇಷ ರೀತಿಯಲ್ಲಿ ಎಚ್ಚರಿಕೆ ನೀಡಲಾಯಿತು ಎಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಇನ್ಸ್'ಪೆಕ್ಟರ್ ಮಂಜುನಾಥ್ ಬಿ.ಎಸ್ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT