ಸಾಂದರ್ಭಿಕ ಚಿತ್ರ 
ರಾಜ್ಯ

ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಗ್ರಾಮಗಳಿಗೆ ಸರ್ಕಾರದಿಂದ ಉಚಿತ ವಾಹನ ವ್ಯವಸ್ಥೆ

ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಿಂದ ಕೊರೋನಾ ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಸರ್ಕಾರ ವ್ಯವಸ್ಥೆ ಮಾಡುತ್ತಿದೆ.

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಿಂದ ಕೊರೋನಾ ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಸರ್ಕಾರ ವ್ಯವಸ್ಥೆ ಮಾಡುತ್ತಿದೆ.

ಗ್ರಾಮಗಳಿಂದ ಕೋವಿಡ್ ಕೇರ್ ಕೇಂದ್ರಗಳಿಗೆ ರೋಗಿಗಳನ್ನು ಕರೆದೊಯ್ಯಲು ಗ್ರಾಮೀಣಾಭಿವೃದ್ಧಿ ಮತ್ತು  ಪಂಚಾಯತ್ ರಾಜ್ ಇಲಾಖೆ ಉಚಿತವಾಗಿ ವಾಹನ ವ್ಯವಸ್ಥೆ ಮಾಡಲಿದೆ. ಖಾಸಗಿ ಸಹಭಾಗಿತ್ವದಲ್ಲಿ ವಾಹನ ಒದಗಿಸಲು ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.

ರಾಜ್ಯದಲ್ಲಿ 6ಸಾವಿರ ಗ್ರಾಮ ಪಂಚಾಯಿತಿಗಳಿದ್ದು, ಮುಂದಿನ ಕೆಲ ತಿಂಗಳುಗಳಲ್ಲಿ ಸ್ಥಳೀಯ ಪಂಚಾಯಿತಿಗಳಿಗೆ ವಾಹನ ವ್ಯವಸ್ಥೆ ಮಾಡಲಾಗುವುದು, ಪಂಚಾಯತ್‌ಗಳು ಅವರಿಗೆ ನೀಡಲಾಗಿದ್ದ 50,000 ರೂಗಳನ್ನು ವಿವಿಧ ವೆಚ್ಚಗಳಿಗಾಗಿ ಬಳಸಿಕೊಳ್ಳಬಹುದು. ಇದಲ್ಲದೆ, ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿಗಳಿಗೆ ಜನರಿಗೆ ಲಸಿಕೆ ಬರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡಲಾಗಿದೆ.

ಐಸಿಯು ಸ್ಥಾಪಿಸುವ ಬಗ್ಗೆಯೂ ರಾಜ್ಯ ಸರ್ಕಾರ ಗಮನಹರಿಸುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) 9 ಲಕ್ಷ ಕಿ.ಮೀ ಕ್ರಮಿಸಿರುವ ಬಸ್‌ಗಳನ್ನು ‘ಐಸಿಯು ಆನ್ ವೀಲ್ಸ್’ ಆಗಿ ಪರಿವರ್ತಿಸಿದ್ದು, ಇದು ಆಮ್ಲಜನಕವನ್ನು ಒದಗಿಸುತ್ತದೆ ಮತ್ತು ರೋಗಿಗಳನ್ನು ಮೇಲ್ವಿಚಾರಣೆ ಮಾಡುತ್ತದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಇತರ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಇಂತಹ 100 ಬಸ್‌ಗಳನ್ನು ಅಭಿವೃದ್ಧಿಪಡಿಸಲಿದ್ದು, ಆಸ್ಪತ್ರೆ ವ್ಯವಸ್ಥೆ ಇಲ್ಲದ 100 ಹಿಂದುಳಿದ ಗ್ರಾಮಗಳಿಗೆ ನೀಡಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT