ಬಸವರಾಜ ಬೊಮ್ಮಾಯಿ 
ರಾಜ್ಯ

ಲಸಿಕೆ ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ

ಕೋವಿಡ್‌ ಲಸಿಕೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. 

ಬೆಂಗಳೂರು: ಕೋವಿಡ್‌ ಲಸಿಕೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. 

ಲಸಿಕೆಯನ್ನು ಅಕ್ರಮ ದಾಸ್ತಾನು ಮಾಡಿರುವುದು ಮತ್ತು ಸಾಗಾಟ ಮಾಡಿರುವುದು ಗಮನಕ್ಕೆ ಬಂದಿದೆ. ಈ ಅಪರಾಧದಲ್ಲಿ ಆಸ್ಪತ್ರೆಯ ವೈದ್ಯರೂ ಮತ್ತು ಸಿಬ್ಬಂದಿ ಶಾಮೀಲಾಗಿರುವುದೂ ಪತ್ತೆ ಆಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಅಕ್ರಮವಾಗಿ ಸಂಗ್ರಹಿಸಿಡುವುದು ಅಕ್ಷಮ್ಯ ಅಪರಾಧ. ಜನರ ಜೀವ ಉಳಿಸುವ ಲಸಿಕೆಯನ್ನು ಹಣದ ಆಸೆಗೆ ಅಕ್ರಮವಾಗಿ ಮಾರಾಟ ಮಾಡಿದರೆ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಸಿದರು.

ರೆಮಿಡಿಸಿವಿರ್‌ ಇಂಜಕ್ಷನ್ ವಿಷಯದಲ್ಲಿ ಈ ರೀತಿ ಮಾಡಿದ್ರು, ಆ ನಂತರ ಅದು ಸರಿ ಹೋಗಿದೆ, ಇವಾಗ ವ್ಯಾಕ್ಸಿನೇಷನ್‌ ಅಕ್ರಮ ದಂಧೆ ನಡೆದರೆ ಅದನ್ನೂ ಬಿಡಲ್ಲ. ಇಂತವರ ಮೇಲೆ ಕಠಿಣ ಕ್ರಮ ಕೈಗೊಳ್ತೇವೆ ಎಂದರು.

ರಾಜ್ಯದಲ್ಲಿ ವ್ಯಾಕ್ಸಿನೇಷನ್‌ ಕೊರತೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊರತೆ ನೀಗಿಸಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗ್ತಿದೆ. ಖಾಸಗಿಯವರು ಹೆಚ್ಚಿನ ದರದಲ್ಲಿ ವ್ಯಾಕ್ಸಿನೇಷನ್‌ ನೀಡುವ ಸಂಬಂಧ ಕೇಂದ್ರ ಒಂದು ನಿಯಮ ರೂಪಿಸುವ ಅಗತ್ಯ ಇದೆ ಎಂದರು.

ಸೋಮವಾರದಿಂದ ಎರಡನೇ ಹಂತದ ಲಾಕ್ ಡೌನ್ ವಿಸ್ತರಣೆಯಾಗಿದೆ. ಇನ್ನಷ್ಟು ಬಿಗಿ ಕ್ರಮಕ್ಕೆ ಸೂಚನೆಯನ್ನು ರಾಜ್ಯದ ಪೊಲೀಸರಿಗೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವ ವಾಹನಗಳ ಸೀಜ್ ಮಾಡುವ ಪ್ರಕರಣ ಮುಂದುವರೆಸಲಾಗುತ್ತೆ. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಓಡಾಡುವವರನ್ನು ಸುಮ್ಮನೆ ಬಿಡಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಲಾಕ್ ಡೌನ್ ಪರಿಣಾಮಕಾರಿಯಾಗಿದೆ, ಜನರು ನಿಯಮಗಳನ್ನು ಪಾಲಿಸುತ್ತಿದ್ದಾರೆ. ಆದರೆ, ಪಟ್ಟಣ ಪ್ರದೇಶದಲ್ಲಿ ಜನರು ಮಾರ್ಗಸೂಚಿ ಉಲ್ಲಂಘಿಸುತ್ತಿದ್ದಾರೆ. ಆದ್ದರಿಂದ, ಬಿಗಿಯಾದ ಕ್ರಮಗಳನ್ನು ತಗೆದುಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವವರನ್ನು ಬಿಡುವುದಿಲ್ಲ. ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT