ಬಸವರಾಜ ಬೊಮ್ಮಾಯಿ 
ರಾಜ್ಯ

ಲಸಿಕೆ ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ

ಕೋವಿಡ್‌ ಲಸಿಕೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. 

ಬೆಂಗಳೂರು: ಕೋವಿಡ್‌ ಲಸಿಕೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. 

ಲಸಿಕೆಯನ್ನು ಅಕ್ರಮ ದಾಸ್ತಾನು ಮಾಡಿರುವುದು ಮತ್ತು ಸಾಗಾಟ ಮಾಡಿರುವುದು ಗಮನಕ್ಕೆ ಬಂದಿದೆ. ಈ ಅಪರಾಧದಲ್ಲಿ ಆಸ್ಪತ್ರೆಯ ವೈದ್ಯರೂ ಮತ್ತು ಸಿಬ್ಬಂದಿ ಶಾಮೀಲಾಗಿರುವುದೂ ಪತ್ತೆ ಆಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಅಕ್ರಮವಾಗಿ ಸಂಗ್ರಹಿಸಿಡುವುದು ಅಕ್ಷಮ್ಯ ಅಪರಾಧ. ಜನರ ಜೀವ ಉಳಿಸುವ ಲಸಿಕೆಯನ್ನು ಹಣದ ಆಸೆಗೆ ಅಕ್ರಮವಾಗಿ ಮಾರಾಟ ಮಾಡಿದರೆ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಸಿದರು.

ರೆಮಿಡಿಸಿವಿರ್‌ ಇಂಜಕ್ಷನ್ ವಿಷಯದಲ್ಲಿ ಈ ರೀತಿ ಮಾಡಿದ್ರು, ಆ ನಂತರ ಅದು ಸರಿ ಹೋಗಿದೆ, ಇವಾಗ ವ್ಯಾಕ್ಸಿನೇಷನ್‌ ಅಕ್ರಮ ದಂಧೆ ನಡೆದರೆ ಅದನ್ನೂ ಬಿಡಲ್ಲ. ಇಂತವರ ಮೇಲೆ ಕಠಿಣ ಕ್ರಮ ಕೈಗೊಳ್ತೇವೆ ಎಂದರು.

ರಾಜ್ಯದಲ್ಲಿ ವ್ಯಾಕ್ಸಿನೇಷನ್‌ ಕೊರತೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊರತೆ ನೀಗಿಸಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗ್ತಿದೆ. ಖಾಸಗಿಯವರು ಹೆಚ್ಚಿನ ದರದಲ್ಲಿ ವ್ಯಾಕ್ಸಿನೇಷನ್‌ ನೀಡುವ ಸಂಬಂಧ ಕೇಂದ್ರ ಒಂದು ನಿಯಮ ರೂಪಿಸುವ ಅಗತ್ಯ ಇದೆ ಎಂದರು.

ಸೋಮವಾರದಿಂದ ಎರಡನೇ ಹಂತದ ಲಾಕ್ ಡೌನ್ ವಿಸ್ತರಣೆಯಾಗಿದೆ. ಇನ್ನಷ್ಟು ಬಿಗಿ ಕ್ರಮಕ್ಕೆ ಸೂಚನೆಯನ್ನು ರಾಜ್ಯದ ಪೊಲೀಸರಿಗೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವ ವಾಹನಗಳ ಸೀಜ್ ಮಾಡುವ ಪ್ರಕರಣ ಮುಂದುವರೆಸಲಾಗುತ್ತೆ. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಓಡಾಡುವವರನ್ನು ಸುಮ್ಮನೆ ಬಿಡಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಲಾಕ್ ಡೌನ್ ಪರಿಣಾಮಕಾರಿಯಾಗಿದೆ, ಜನರು ನಿಯಮಗಳನ್ನು ಪಾಲಿಸುತ್ತಿದ್ದಾರೆ. ಆದರೆ, ಪಟ್ಟಣ ಪ್ರದೇಶದಲ್ಲಿ ಜನರು ಮಾರ್ಗಸೂಚಿ ಉಲ್ಲಂಘಿಸುತ್ತಿದ್ದಾರೆ. ಆದ್ದರಿಂದ, ಬಿಗಿಯಾದ ಕ್ರಮಗಳನ್ನು ತಗೆದುಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವವರನ್ನು ಬಿಡುವುದಿಲ್ಲ. ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT