ಬಸವರಾಜ ಬೊಮ್ಮಾಯಿ 
ರಾಜ್ಯ

ಲಸಿಕೆ ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ

ಕೋವಿಡ್‌ ಲಸಿಕೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. 

ಬೆಂಗಳೂರು: ಕೋವಿಡ್‌ ಲಸಿಕೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. 

ಲಸಿಕೆಯನ್ನು ಅಕ್ರಮ ದಾಸ್ತಾನು ಮಾಡಿರುವುದು ಮತ್ತು ಸಾಗಾಟ ಮಾಡಿರುವುದು ಗಮನಕ್ಕೆ ಬಂದಿದೆ. ಈ ಅಪರಾಧದಲ್ಲಿ ಆಸ್ಪತ್ರೆಯ ವೈದ್ಯರೂ ಮತ್ತು ಸಿಬ್ಬಂದಿ ಶಾಮೀಲಾಗಿರುವುದೂ ಪತ್ತೆ ಆಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಅಕ್ರಮವಾಗಿ ಸಂಗ್ರಹಿಸಿಡುವುದು ಅಕ್ಷಮ್ಯ ಅಪರಾಧ. ಜನರ ಜೀವ ಉಳಿಸುವ ಲಸಿಕೆಯನ್ನು ಹಣದ ಆಸೆಗೆ ಅಕ್ರಮವಾಗಿ ಮಾರಾಟ ಮಾಡಿದರೆ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಸಿದರು.

ರೆಮಿಡಿಸಿವಿರ್‌ ಇಂಜಕ್ಷನ್ ವಿಷಯದಲ್ಲಿ ಈ ರೀತಿ ಮಾಡಿದ್ರು, ಆ ನಂತರ ಅದು ಸರಿ ಹೋಗಿದೆ, ಇವಾಗ ವ್ಯಾಕ್ಸಿನೇಷನ್‌ ಅಕ್ರಮ ದಂಧೆ ನಡೆದರೆ ಅದನ್ನೂ ಬಿಡಲ್ಲ. ಇಂತವರ ಮೇಲೆ ಕಠಿಣ ಕ್ರಮ ಕೈಗೊಳ್ತೇವೆ ಎಂದರು.

ರಾಜ್ಯದಲ್ಲಿ ವ್ಯಾಕ್ಸಿನೇಷನ್‌ ಕೊರತೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊರತೆ ನೀಗಿಸಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗ್ತಿದೆ. ಖಾಸಗಿಯವರು ಹೆಚ್ಚಿನ ದರದಲ್ಲಿ ವ್ಯಾಕ್ಸಿನೇಷನ್‌ ನೀಡುವ ಸಂಬಂಧ ಕೇಂದ್ರ ಒಂದು ನಿಯಮ ರೂಪಿಸುವ ಅಗತ್ಯ ಇದೆ ಎಂದರು.

ಸೋಮವಾರದಿಂದ ಎರಡನೇ ಹಂತದ ಲಾಕ್ ಡೌನ್ ವಿಸ್ತರಣೆಯಾಗಿದೆ. ಇನ್ನಷ್ಟು ಬಿಗಿ ಕ್ರಮಕ್ಕೆ ಸೂಚನೆಯನ್ನು ರಾಜ್ಯದ ಪೊಲೀಸರಿಗೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವ ವಾಹನಗಳ ಸೀಜ್ ಮಾಡುವ ಪ್ರಕರಣ ಮುಂದುವರೆಸಲಾಗುತ್ತೆ. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಓಡಾಡುವವರನ್ನು ಸುಮ್ಮನೆ ಬಿಡಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಲಾಕ್ ಡೌನ್ ಪರಿಣಾಮಕಾರಿಯಾಗಿದೆ, ಜನರು ನಿಯಮಗಳನ್ನು ಪಾಲಿಸುತ್ತಿದ್ದಾರೆ. ಆದರೆ, ಪಟ್ಟಣ ಪ್ರದೇಶದಲ್ಲಿ ಜನರು ಮಾರ್ಗಸೂಚಿ ಉಲ್ಲಂಘಿಸುತ್ತಿದ್ದಾರೆ. ಆದ್ದರಿಂದ, ಬಿಗಿಯಾದ ಕ್ರಮಗಳನ್ನು ತಗೆದುಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವವರನ್ನು ಬಿಡುವುದಿಲ್ಲ. ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT