ರಾಜ್ಯ

ಹಳ್ಳಿಗಳಲ್ಲಿ ಹೆಚ್ಚಿದ ಕೊರೋನಾ: ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ

Manjula VN

ಬೆಂಗಳೂರು: ಕೊರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. 

ಈ ಮೂಲಕ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿನ ಕೋವಿಡ್ ತೀವ್ರತೆಯನ್ನು ಕಡಿಮೆಗೊಳಿಸಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆಂದು ತಿಳಿದುಬಂದಿದೆ. 

ಇಂದು ಮಧ್ಯಾಹ್ನ 12.30ರ ಸುಮಾರಿಗೆ ಸಭೆ ನಡೆಸಲಿದೆ. ಇದೂವರೆಗೆ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸುತ್ತಿದ್ದ ಮುಖ್ಯಮಂತ್ರಿಗಳು ಇದೇ ಮೊದಲ ಬಾರಿಗೆ ನೇರವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂವಾದ ನಡೆಸಲು ನಿರ್ಧರಿಸಿದ್ದಾರೆ. 

SCROLL FOR NEXT