ಸಿಎಂ ಯಡಿಯೂರಪ್ಪ 
ರಾಜ್ಯ

ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಮಾರ್ಗ ಜುಲೈನಲ್ಲಿ ಪ್ರಯಾಣಿಕರ ಓಡಾಟಕ್ಕೆ ಮುಕ್ತ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ನಾಯಂಡಹಳ್ಳಿಯಿಂದ ಕೆಂಗೇರಿ ವರೆಗಿನ ಮೆಟ್ರೋ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜುಲೈ ತಿಂಗಳಿನಲ್ಲಿ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. 

ಬೆಂಗಳೂರು: ನಾಯಂಡಹಳ್ಳಿಯಿಂದ ಕೆಂಗೇರಿ ವರೆಗಿನ ಮೆಟ್ರೋ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜುಲೈ ತಿಂಗಳಿನಲ್ಲಿ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. 

ಮಂಗಳವಾರ ವಿಧಾನಸೌಧದ ಬಳಿಯಿರುವ ಡಾ.ಬಿ.ಆರ್.ಅಂಬೇಡ್ಕರ್ ನಿಲ್ದಾಣದಿಂದ ವಿಶೇಷ ಮೆಟ್ರೋ ಏರಿದ ಮುಖ್ಯಮಂತ್ರಿಗಳು ಅಲ್ಲಿಂದ ನಾಯಂಡಹಳ್ಳಿ, ರಾಜರಾಜೇಶ್ವರಿ ನಿಲ್ದಾಣ, ಕೆಂಗೇರಿ ನಿಲ್ದಾಣಗಳನ್ನು ಪರಿಶೀಲಿಸಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ಮೆಟ್ರೋ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜುಲೈನಲ್ಲಿ ಕಾರ್ಯಾರಂಭ ಮಾಡಲಿದೆ. ಈ ವಿಸ್ತರಿತ ಮಾರ್ಗದಿಂದ 75 ಸಾವಿರ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. 

ಒಟ್ಟು 7.53 ಕಿ.ಮೀ. ಉದ್ದದ ಈ ವಿಸ್ತರಣೆ ಕಾಮಗಾರಿಗೆ 1,560 ಕೋಟಿ ರೂ. ವೆಚ್ಚ ತಗುಲಿದೆ. ಭೂ-ಸ್ವಾಧೀನಕ್ಕೆ 360 ಕೋಟಿ ರೂ. ವೆಚ್ಚವಾಗಿದೆ. ಇದರಿಂದಾಗಿ ಪೂರ್ವ-ಪಶ್ಚಿಮ ಕಾರಿಡಾರ್ ಮಾರ್ಗದ ಉದ್ದ 18.1 ಕಿ.ಮೀ. ಗೆ ಹೆಚ್ಚಳವಾಗಿದೆ. ಇದರಲ್ಲಿ ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್-ಟರ್ಮಿನಲ್ ಹಾಗೂ ಕೆಂಗೇರಿ - ಒಟ್ಟು 6 ನಿಲ್ದಾಣಗಳಿವೆ. ಇದರಲ್ಲಿ ನಾಯಂಡಹಳ್ಳಿ, ರಾಜರಾಜೇಶ್ವರಿನಗರ, ಜ್ಞಾನಭಾರತಿ ನಿಲ್ದಾಣಗಳಲ್ಲಿ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಕೆಂಗೇರಿ ಬಸ್-ಟರ್ಮಿನಲ್ ನಿಲ್ದಾಣದಲ್ಲಿ ಎರಡು ಅಂತಸ್ತಿನ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT