ಸಿಎಂ ಯಡಿಯೂರಪ್ಪ 
ರಾಜ್ಯ

ಮೇಕೆದಾಟು ಬಿಕ್ಕಟ್ಟು: ಕಾನೂನು ತಜ್ಞರ ಸಲಹೆ ಪಡೆಯಲು ಸಿಎಂ ಯಡಿಯೂರಪ್ಪ ನಿರ್ಧಾರ

ಮೇಕೆದಾಟು ಯೋಜನೆ ವಿಚಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ದಿನಪತ್ರಿಕೆ ವರದಿ ಆಧರಿಸಿ ರಚನೆ ಮಾಡಿರುವ ಸಮಿತಿ ವಿರುದ್ಧ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕಾನೂನು ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ದಿನಪತ್ರಿಕೆ ವರದಿ ಆಧರಿಸಿ ರಚನೆ ಮಾಡಿರುವ ಸಮಿತಿ ವಿರುದ್ಧ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕಾನೂನು ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ಪೀಠವು ಮೇಕೆದಾಟು ಯೋಜನೆ ಸಂಬಂಧಪಟ್ಟಂತೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.ಈ ಸಂಬಂಧ ಸಮಿತಿಯನ್ನು ಕೂಡ ರಚಿಸಿದೆ ಎಂದು ಹೇಳಿದ್ದಾರೆ. 

ಮೇಕೆದಾಟು ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲಿದೆ ಎಂಬುದರ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸಮಿತಿಗೆ ಪೀಠ ಸೂಚಿಸಿದೆ. ಪರಿಸರ ಪರಿಣಾಮ ಬಗ್ಗೆ ಯಾರೊಬ್ಬರೂ ಅಕ್ಷೇಪಣೆ ಸಲ್ಲಿಸದೆ ಹೋದರೂ ದಿನಪತ್ರಿಕೆಯೊಂದರ ವರದಿ ಆಧರಿಸಿ ಪೀಠವು ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಪಂಡಿತರ ಅಭಿಪ್ರಾಯ ಪಡೆದು ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. 

ಈ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಿಗದಿಯಾಗಿದ್ದು, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಅಂತರ್ ರಾಜ್ಯ ಜಲ ವಿವಾದದ ಕಾನೂನು ಪಂಡಿತರು ಹಾಗೂ ಹಿರಿಯ ವಕೀಲರು ಸಭೆಯಲ್ಲಿ ಮುಂದಿನ ಕಾನೂನು ಹೋರಾಟದ ರೂಪುರೇಷೆ ಸಿದ್ಧವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. 

ಇದೇ ವೇಳೆ ನಾಯಕತ್ವ ಬದಲಾವಣೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಬೊಮ್ಮಾಯಿಯವರು, ಯಾವುದೇ ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಯಾರು ಈ ಬಗ್ಗೆ ಮಾತನಾಡುತ್ತಿದ್ದಾರೋ ಅವರನ್ನೇ ಪ್ರಶ್ನಿಸಿ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT