ಸಿಎಂ ಯಡಿಯೂರಪ್ಪ 
ರಾಜ್ಯ

ಮೇಕೆದಾಟು ಬಿಕ್ಕಟ್ಟು: ಕಾನೂನು ತಜ್ಞರ ಸಲಹೆ ಪಡೆಯಲು ಸಿಎಂ ಯಡಿಯೂರಪ್ಪ ನಿರ್ಧಾರ

ಮೇಕೆದಾಟು ಯೋಜನೆ ವಿಚಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ದಿನಪತ್ರಿಕೆ ವರದಿ ಆಧರಿಸಿ ರಚನೆ ಮಾಡಿರುವ ಸಮಿತಿ ವಿರುದ್ಧ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕಾನೂನು ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ದಿನಪತ್ರಿಕೆ ವರದಿ ಆಧರಿಸಿ ರಚನೆ ಮಾಡಿರುವ ಸಮಿತಿ ವಿರುದ್ಧ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕಾನೂನು ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ಪೀಠವು ಮೇಕೆದಾಟು ಯೋಜನೆ ಸಂಬಂಧಪಟ್ಟಂತೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.ಈ ಸಂಬಂಧ ಸಮಿತಿಯನ್ನು ಕೂಡ ರಚಿಸಿದೆ ಎಂದು ಹೇಳಿದ್ದಾರೆ. 

ಮೇಕೆದಾಟು ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲಿದೆ ಎಂಬುದರ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸಮಿತಿಗೆ ಪೀಠ ಸೂಚಿಸಿದೆ. ಪರಿಸರ ಪರಿಣಾಮ ಬಗ್ಗೆ ಯಾರೊಬ್ಬರೂ ಅಕ್ಷೇಪಣೆ ಸಲ್ಲಿಸದೆ ಹೋದರೂ ದಿನಪತ್ರಿಕೆಯೊಂದರ ವರದಿ ಆಧರಿಸಿ ಪೀಠವು ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಪಂಡಿತರ ಅಭಿಪ್ರಾಯ ಪಡೆದು ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. 

ಈ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಿಗದಿಯಾಗಿದ್ದು, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಅಂತರ್ ರಾಜ್ಯ ಜಲ ವಿವಾದದ ಕಾನೂನು ಪಂಡಿತರು ಹಾಗೂ ಹಿರಿಯ ವಕೀಲರು ಸಭೆಯಲ್ಲಿ ಮುಂದಿನ ಕಾನೂನು ಹೋರಾಟದ ರೂಪುರೇಷೆ ಸಿದ್ಧವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. 

ಇದೇ ವೇಳೆ ನಾಯಕತ್ವ ಬದಲಾವಣೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಬೊಮ್ಮಾಯಿಯವರು, ಯಾವುದೇ ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಯಾರು ಈ ಬಗ್ಗೆ ಮಾತನಾಡುತ್ತಿದ್ದಾರೋ ಅವರನ್ನೇ ಪ್ರಶ್ನಿಸಿ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT