ಲಾಕ್ ಡೌನ್ ವೇಳೆಯಲ್ಲಿ ಬೆಂಗಳೂರಿನ ಜೆ. ಸಿ. ರಸ್ತೆಯ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಣೆ ಶೇ.36 ರಷ್ಟು ಮಾತ್ರ ಪರಿಣಮಕಾರಿ: ತಜ್ಞರು

ರಾಜ್ಯದಲ್ಲಿ ಕೋವಿಡ್-19 ಕರ್ಫ್ಯೂ ವಿಸ್ತರಣೆ ಮಾಡಿರುವುದು ಶೇ.36 ರಷ್ಟು ಮಾತ್ರ ಪರಿಣಾಮಕಾರಿಯಾಗಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಕರ್ಫ್ಯೂ ವಿಸ್ತರಣೆ ಮಾಡಿರುವುದು ಶೇ.36 ರಷ್ಟು ಮಾತ್ರ ಪರಿಣಾಮಕಾರಿಯಾಗಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ. 

ಮೇ.10-24 ರಂದು ಲಾಕ್ ಡೌನ್ ನಲ್ಲಿ ಶೇ.80 ರಷ್ಟು ಪರಿಣಾಮಕಾರಿಯಾಗಿತ್ತು. ಆದರೆ ಮೇ.19 ರಂದು ವಿಸ್ತರಣೆ ಮಾಡಿದ ಬಳಿಕ ಪರಿಣಾಮಕಾರಿತ್ವ ಶೇ.36 ರಷ್ಟು ಮಾತ್ರ ಇದೆ, ಕೋವಿಡ್-19 ತಡೆಗೆ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಐಐಎಸ್ ಸಿಯ ಕಂಪ್ಯೂಟೇಶನಲ್ ಮತ್ತು ಡಾಟಾ ಸೈನ್ಸಸ್ ವಿಭಾಗದ ತಂಡ ಹೇಳಿದೆ.

ಮೂರು ಬೇರೆ ಬೇರೆ ಸನ್ನಿವೇಶಗಳು ನಿರೀಕ್ಷಿಸಲಾಗಿದ್ದ ಪೈಕಿ ಮೇ.25 ವರೆಗಿನ ವಾಸ್ತವದಲ್ಲಿ ದೃಢಪಟ್ಟಿರುವ ಪ್ರಕರಣಗಳು ಏರಿಕೆ ಕಂಡಿವೆ. ಲಾಕ್ ಡೌನ್ ಇಲ್ಲದ  ಅತ್ಯಂತ ಕೆಟ್ಟ ಸಂದರ್ಭದಲ್ಲಿ 24.28 ಲಕ್ಷ ಪ್ರಕರಣಗಳನ್ನು ನಿರೀಕ್ಷಿಸಲಾಗಿತ್ತು, ಶೇ.50 ರಷ್ಟು ಲಾಕ್ ಡೌನ್ ನಲ್ಲಿ 24.21 ಲಕ್ಷ ಇತ್ತು. ಪೂರ್ತಿ ಪರಿಣಾಮಕಾರಿ ಸಂದರ್ಭದಲ್ಲಿ 24.04 ಲಕ್ಷ ಇತ್ತು. 

ಆದರೆ ಒಟ್ಟು ದೃಢಪಟ್ಟ ಪ್ರಕರಣಗಳು 24.72 ಲಕ್ಷ ಪ್ರಕರಣಗಳು ತೀರಾ ಕೆಟ್ಟ ಪರಿಸ್ಥಿತಿಯ ನಿರೀಕ್ಷೆಗಿಂತಲೂ ಹೆಚ್ಚಾಗಿತ್ತು. ಇದು ಸಕ್ರಿಯ ಪ್ರಕರಣಗಳಷ್ಟೇ ಇದೆ ಎಂದು ಕಂಪ್ಯೂಟೇಶನಲ್ ಮತ್ತು ಡಾಟಾ ಸೈನ್ಸಸ್ ವಿಭಾಗದ ನಿರ್ದೇಶಕ ಪ್ರೊಫೆಸರ್ ಸಶಿಕುಮಾರ್ ಗಣೇಶನ್ ಹೇಳಿದ್ದಾರೆ.
 
ಪ್ರಸ್ತುತ ಇರುವ ವಾಸ್ತವ ಪ್ರಕರಣಗಳ ಆಧಾರದಲ್ಲಿ ರೂಪಿಸಲಾಗಿರುವ ಮಾಡಲ್ ನ ಪ್ರಕಾರ ತೀರಾ ಕೆಟ್ಟ ಪರಿಸ್ಥಿತಿಗಳಲ್ಲಿ ರಾಜ್ಯದಲ್ಲಿ 4,18,275 ಪ್ರಕರಣಗಳು ವರದಿಯಾಗಲಿವೆ ಎಂದು ಊಹಿಸಲಾಗಿತ್ತು. ಆದರೆ ವಾಸ್ತವದಲ್ಲಿ 4.24 ಲಕ್ಷ ಪ್ರಕರಣಗಳಿವೆ. ಲಾಕ್ ಡೌನ್ ವಿಸ್ತರಣೆಯಿಂದ ಕೋವಿಡ್-19 ಪ್ರಕರಣಗಳು ಇಳಿಕೆಯಾಗುವ ನಿರೀಕ್ಷೆ ಇತ್ತು. ಆದರೆ ಮೇ.19-25 ವರೆಗೂ ಪ್ರಕರಣಗಳು ಸಕ್ರಿಯ ಪ್ರಕರಣಗಳು ಏರುಗತಿಯಲ್ಲಿಯೇ ಇವೆ ಇದು ಎಚ್ಚರಿಕೆಯ ಗಂಟೆ ಎಂದು ಪ್ರೊಫೆಸರ್ ಶಶಿಕುಮಾರ್ ಗಣೇಶನ್ ಹೇಳಿದ್ದಾರೆ.

ಆದರೆ ಲಾಕ್ ಡೌನ್ ಪರಿಣಾಮಕಾರಿಯಾಗಿಲ್ಲ ಎಂಬ ಕಾರಣವನ್ನು ನೀಡುವುದಕ್ಕೂ ಸಾಧ್ಯವಾಗುವುದಿಲ್ಲ ಎಂದು ಶಶಿಕುಮಾರ್ ಗಣೇಶನ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT