ಸಚಿವ ಜಗದೀಶ್ ಶೆಟ್ಟರ್ 
ರಾಜ್ಯ

ಆಕ್ಸಿಜನ್ ಘಟಕ ಸ್ಥಾಪಿಸುವ ಕೈಗಾರಿಕೋದ್ಯಮಿಗಳ ಪ್ರೋತ್ಸಾಹಿಸಲು ಉತ್ತೇಜಕ ಯೋಜನೆ: ಸಚಿವ ಜಗದೀಶ್ ಶೆಟ್ಟರ್

ನೂತನ ಆಮ್ಲಜನಕ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಕೈಗಾರಿಕಾ ಇಲಾಖೆಯಿಂದ ಉತ್ತೇಜಕ ಯೋಜನೆ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸುವ ಉದ್ದೇಶದಿಂದ ನೂತನ ಆಮ್ಲಜನಕ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಕೈಗಾರಿಕಾ ಇಲಾಖೆಯಿಂದ ಉತ್ತೇಜಕ ಯೋಜನೆ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರು ಹೇಳಿದ್ದಾರೆ.

ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯಕ್ಕೆ 1200 ಮೆಟ್ರಿಕ್ ಟನ್ ದ್ರವೀಕೃತ ಆಮ್ಲಜನಕವನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಹೆಚ್ಚಿನ ಪ್ರಮಾಣದಲ್ಲಿ ರಾಜ್ಯದಲ್ಲಿಯೇ ಬಳಸಿಕೊಳ್ಳಲು ಅನುಮತಿ ನೀಡಿರುವುದರಿಂದ ಸಾಗಣೆ ಸಮಯ ಉಳಿಯಲಿದೆ ಎಂದು ಹೇಳಿದ್ದಾರೆ. 

ಕೇಂದ್ರ ಸರ್ಕಾರದೊಂದಿಗೆ ನಿರಂತರ ಮಾತುಕತೆ ಸಫಲವಾಗಿದ್ದು, ರಾಜ್ಯದಲ್ಲಿ ಆಮ್ಲಜನಕದ ಉತ್ಪಾದನೆಯನ್ನು ಹೆಚ್ಚಿಸುವ ಉದ್ದೇಶದಿಂದ ನೂತನ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸಲು ಮುಂದಾಗುವ ಕೈಗಾರಿಕೋದ್ಯಮಿಗಳಿಗೆ ಆಕರ್ಷಕ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಬಗ್ಗೆ ವಿಸ್ತೃತ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ಆಮ್ಲಜನಕ ಬಫರ್ ಸ್ಟಾಕ್ ಸ್ಟೊರೇಜ್ ಸಾಮರ್ಥ್ಯವನ್ನು ಹೆಚ್ಚಿಸಲು ಯೋಜನೆ ರೂಪಿಸವಂತೆ ಸೂಚಿಸಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ 20 ಮೆಟ್ರಿಕ್ ಟನ್ ನಷ್ಟು ಸ್ಟೋರೇಜ್ ಸಾಮರ್ಥ್ಯ ಹೆಚ್ಚಿಸಿದರೆ ತುರ್ತು ಸಂದರ್ಭದಲ್ಲಿ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು. 

ಆಯಾ ಜಿಲ್ಲೆಗಳಲ್ಲಿ ಇರುವ ಸಕ್ರಿಯಯ ಪ್ರಕರಣಗಳ ಆಧಾರದ ಮೇಲೆ ಆಮ್ಲಜನಕವನ್ನು ಹಂಚಿಕೆ ಮಾಡಲಾಗುತ್ತಿದೆ. ಪ್ರತಿ ದಿನ ಆಯಾ ಆಸ್ಪತ್ರೆಗಳಿಗೆ ನಿಗದಿಪಡಿಸಲಾಗಿರುವ ಪ್ರಮಾಣದಲ್ಲಿ ಆಮ್ಲಜನಕ ರವಾನೆ ಆಗುತ್ತಿರುವ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಕಳೆದ 5 ದಿನಗಳಲ್ಲಿ ಕ್ರಮವಾಗಿ 889.93, 855.21, 1062.71, 899.22 ಮತ್ತು 728.36 ಟನ್‌ ಆಮ್ಲಜನಕ ರಾಜ್ಯಕ್ಕೆ ದೊರಕಿದೆ. ಒಟ್ಟಾರೆಯಾಗಿ ಸರಾಸರಿಯಾಗಿ 887.08 ಟನ್‌ ಆಮ್ಲಜನಕ ದೊರೆತಿದೆ. ಕೇಂದ್ರ ಸಹಕಾರದಿಂದ 150 ಟನ್‌ ದ್ರವೀಕೃತ ಆಮ್ಲಜನಕ ಮಂಗಳೂರು ಬಂದರಿಗೆ ಬಂದು ತಲುಪಿದೆ. ಕೇಂದ್ರದ ಸಹಕಾರದಿಂದ ರೈಲುಗಳಲ್ಲಿ ರವಾನೆಯಾಗುತ್ತಿರುವ ಆಮ್ಲಜನಕದಿಂದ ರಾಜ್ಯದಲ್ಲಿ ಆಮ್ಲಜನಕ ಪರಿಸ್ಥಿತಿ ದಿನೇ ದಿನೇ ಸುಧಾರಿಸುತ್ತಿದೆ’ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT