ಬಿಜೆಪಿ ಶಾಸಕ ಅಭಯ್ ಪಾಟೀಲ್ 
ರಾಜ್ಯ

ಕೊರೋನಾ ಓಡಿಸಲು ಗಲ್ಲಿಗಳಲ್ಲಿ 'ಅಗ್ನಿಹೋತ್ರ' ಹೋಮ, ಹವನ ನಡೆಸಿದ ಬಿಜೆಪಿ ಶಾಸಕ ಅಭಯ್ ಪಾಟೀಲ್!

ಸಾಂಕ್ರಾಮಿಕ ರೋಗವಾಗಿ ಪರಿಣಮಿಸಿರುವ ಕೊರೋನಾ ಮಹಾಮಾರಿ ವೈರಸ್ ಓಡಿಸಲು ಬಿಜೆಪಿ ಶಾಸಕ ಅಭಯ್ ಪಾಲೀಟ್ ಅವರು ಬೆಳಗಾವಿ ಜಿಲ್ಲೆಯಲ್ಲಿ 'ಅಗ್ನಿಹೋತ್ರ' ಹೋಮ, ಹವನ ನಡೆಸಿದ್ದು, ಬಿಜೆಪಿ ನಾಯಕರ ಈ ವರ್ದನೆ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. 

ಬೆಳಗಾವಿ: ಸಾಂಕ್ರಾಮಿಕ ರೋಗವಾಗಿ ಪರಿಣಮಿಸಿರುವ ಕೊರೋನಾ ಮಹಾಮಾರಿ ವೈರಸ್ ಓಡಿಸಲು ಬಿಜೆಪಿ ಶಾಸಕ ಅಭಯ್ ಪಾಲೀಟ್ ಅವರು ಬೆಳಗಾವಿ ಜಿಲ್ಲೆಯಲ್ಲಿ 'ಅಗ್ನಿಹೋತ್ರ' ಹೋಮ, ಹವನ ನಡೆಸಿದ್ದು, ಬಿಜೆಪಿ ನಾಯಕರ ಈ ವರ್ದನೆ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. 

ಕೊರೋನಾ ಲಾಕ್ಡೌನ್ ಜಾರಿಯಲ್ಲಿದ್ದು, ಈ ನಡುವಲ್ಲೇ ಅಭಯ್ ಪಾಟೀಲ್ ಅವರು ಬೆಳಗಾವಿಯ ಶಿವಾಜಿ ಗಾರ್ಡನ್ ನಲ್ಲಿ ನಿಯಮ ಉಲ್ಲಂಘಿಸಿ ಹೋಮ ಹವನ ನಡೆಸಿದ್ದಾರೆಂದು ತಿಳಿದುಬಂದಿದೆ. 

ಬೆಳಗಾವಿ ಜಿಲ್ಲೆಯ ಗಲ್ಲಿಗಲ್ಲಿಗಳಲ್ಲಿ ಶಾಸಕರ ಸಮ್ಮುಖದಲ್ಲಿ ತಳ್ಳುವ ಗಾಡಿಯಲ್ಲಿ ಮನೆಗಳ ಮುಂದೆ ಅಗ್ನಿಕುಂಡದಂತೆ ಮಾಡಿ ಅದರಲ್ಲಿ ಭೆರಣಿ, ಕರ್ಪೂರ, ತುಪ್ಪ, ಗುಗ್ಗಳ, ಬೇವಿನ ಎಲೆಗಳು, ಅಕ್ಕಿ, ಕವಡಿ ಉದ ಹಾಗೂ ಲವಂಗ ಇನ್ನಿತರ ಗಿಡಮೂಲಿಕೆಗಳ ಪದಾರ್ಥಗಳನ್ನ ಹಾಕಿ ಅದರಿಂದ ಬರುವ ಹೊಗೆ ಸಿಂಪಡಣೆ ಮಾಡಿದ್ದಾರೆ. 

ಸರ್ಕಾರ ಜಾರಿಗೆ ತಂದಿರುವ ನಿಯಮಗಳು ಉಲ್ಲಂಘನೆಯಾಗುತ್ತಿದ್ದರೂ, ಸ್ಥಳದಲ್ಲೇ ಇದ್ದ ಪೊಲೀಸರು ಈ ಬೆಳವಣಿಗೆಗಳನ್ನು ತಡೆಯುವ ಪ್ರಯತ್ನಗಳನ್ನು ಮಾಡಿಲ್ಲ. 

ಹೋಮ, ಹವನ ನಡೆಸಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಪಾಟೀಲ್ ಅವರು, ಇದು ಭಾರತದ ಪ್ರಾಚೀನ ಔಷಧೀಯ ಸಂಪ್ರದಾಯಗಳನ್ನು ನೆನೆಪಿಸುತ್ತದೆ. ಈ ಹೋಮ, ಹವನವು ಜೂನ್.15ರವರೆಗೂ ಮುಂದುವರೆಯಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT