ಬಸವರಾಜು ಬೊಮ್ಮಾಯಿ 
ರಾಜ್ಯ

ಮೇಕೆದಾಟು ಯೋಜನೆ ಪರಿಶೀಲನೆಗೆ ಜಂಟಿ ಸಮಿತಿ ರಚನೆ; ಎನ್ ಜಿಟಿ ಆದೇಶ ಪ್ರಶ್ನಿಸಿ ಮೇಲ್ಮನವಿ: ಬೊಮ್ಮಾಯಿ

ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲನೆಗೆ ಜಂಟಿ ಸಮಿತಿ ರಚಿಸುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದಕ್ಷಿಣ ಶಾಖೆಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲನೆಗೆ ಜಂಟಿ ಸಮಿತಿ ರಚಿಸುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದಕ್ಷಿಣ ಶಾಖೆಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ. 

ಗುರುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಅಡ್ವೊಕೇಟ್‌ ಜನರಲ್‌ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ನಿರ್ಧಾರ ಸರಿಯಿಲ್ಲ ಎಂದು ವಾದಿಸಲಿದೆ ಎಂದರು.

ಮೇಕೆದಾಟು ಸಮೀಪದ ರಸ್ತೆಗಳ ಕುರಿತ ವರದಿ ಆಧರಿಸಿ,ಈ ತೀರ್ಪು ನೀಡಲಾಗಿದೆ. ಇದು ಸರಿಯಲ್ಲ ಎಂದು ಬಸವರಾಜು ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು.

ಮೇಕೆದಾಟುವಿನಲ್ಲಿ ಅನಧಿಕೃತ ನಿರ್ಮಾಣ ಚಟುವಟಿಕೆಗಳ ಆರೋಪಕ್ಕೆ ಸಂಬಂಧಿಸಿದಂತೆ  ಪರಿಶೀಲಿಸಲು ಜಂಟಿ ಸಮಿತಿಯೊಂದನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನೇಮಿಸಿದ್ದು, ಜುಲೈ 5ರೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ನಿರ್ದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ