ಸಂಗ್ರಹ ಚಿತ್ರ 
ರಾಜ್ಯ

ಕಾರ್ಪೊರೇಟ್ ಸಂಸ್ಥೆಗಳನ್ನು ಸಂಪರ್ಕಿಸುವ 'ಆಕಾಂಕ್ಷಾ ಪೋರ್ಟಲ್'ಗೆ ಸಿಎಂ ಯಡಿಯೂರಪ್ಪ ಚಾಲನೆ

ಕಾರ್ಪೊರೇಟ್ ಸಂಸ್ಥೆಗಳನ್ನು ಸಂಪರ್ಕಿಸುವ ಸಮಗ್ರ ಆನ್'ಲೈನ್ ವೇದಿಕೆ ಆಕಾಂಕ್ಷಾ ಪೋರ್ಟಲ್'ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಚಾಲನೆ ನೀಡಿದರು.

ಬೆಂಗಳೂರು: ಕಾರ್ಪೊರೇಟ್ ಸಂಸ್ಥೆಗಳನ್ನು ಸಂಪರ್ಕಿಸುವ ಸಮಗ್ರ ಆನ್'ಲೈನ್ ವೇದಿಕೆ ಆಕಾಂಕ್ಷಾ ಪೋರ್ಟಲ್'ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಚಾಲನೆ ನೀಡಿದರು.

ರಾಜ್ಯಮಟ್ಟದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಸೌಲಭ್ಯಗಳನ್ನು ಸುಗಮವಾಗಿ ಮುಂದುವರೆಸಲು ಸರ್ಕಾರ ಮತ್ತು ದಾನಿಗಳ ನಡುವೆ ಒಂದು ಪಾರದರ್ಶಕ ಸೇತುವೆಯಾಗಿ ಈ ಪೋರ್ಟಲ್ ಕಾರ್ಯನಿರ್ವಹಿಸಲಿದೆ. 

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಆಕಾಂಕ್ಷಾ ಪೋರ್ಟಲ್ ನ್ನು ಉದ್ಘಾಟಿಸಿ ಮಾತನಾಡಿದ ಯಡಿಯೂರಪ್ಪ ಅವರು, ಪೋರ್ಟಲ್'ನ ಸಹಾಯದಿಂದ ಸಿಎಸ್ಆರ್ ಅನುದಾನವನ್ನು ಅಗತ್ಯ ಇರುವ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲು ಅನುಕೂಲವಾಗಲಿದೆ. ಕೋವಿಡ್ ನಿಯಂತ್ರಣ ಪ್ರಕ್ರಿಯೆಯಲ್ಲಿ ಕಾರ್ಪೊರೇಟ್ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಕಾರ ಶ್ಲಾಘನೀಯ. ಈಗಾಗಲೇ ಆರೋಗ್ಯ ವಲಯಕ್ಕೆ ರೂ.175 ಕೋಟಿ ಸಿಎಸ್ಆರ್ ನಿಧಿಯನ್ನು ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು. 

ವಿಶ್ವಸಂಸ್ಥೆಯು ನಿಗದಿ ಪಡಿಸಿದ ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗಾಗಿ ವಿಷನ್ 2030 ನ್ನು ತಯಾರಿಸಲಾಗಿದೆ. ಇದಕ್ಕಾಗಿ ಬೇಡಿಕೆ ಇರುವ 75 ಸಾವಿರ ಕೋಟಿ ರೂ. ಅನುದಾನದ ಪೈಕಿ 61,000 ಕೋಟಿ ರೂ. ಗಳನ್ನು ಆಯವ್ಯಯದಲ್ಲಿ ಒದಗಿಸಲಾಗಿದೆ. 

ಕಳೆದ ಸಾಲಿನಲ್ಲಿ ಆರೋಗ್ಯ ವಲಯದ ಚಟುವಟಿಕೆಗಳಿಗೆ 11,527 ಕೋಟಿ ರೂ. ವೆಚ್ಚ ಮಾಡಿದ್ದು, ಪ್ರಸಕ್ತ ಸಾಲಿಗೆ 11,650 ಕೋಟಿ ರೂ. ಒದಗಿಸಲಾಗಿದೆ. ಕೋವಿಡ್ 19ರ ಎರಡನೇ ಅಲೆ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ನಿರ್ಬಂಧದಿಂದ ಬಾಧಿತರಾದವರಿಗೆ 1250 ಕೋಟಿಗೂ ಹೆಚ್ಚು ಮೊತ್ತದ ಪ್ಯಾಕೇಜ್ ಘೋಷಿಸಲಾಗಿದೆ. ಅಲ್ಲದೆ, 2.06 ಲಕ್ಷ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗಿದ್ದು, 956 ಕೋಟಿ ರೂ. ವೆಚ್ಚ ಭರಿಸಲಾಗುತ್ತಿದೆ. ಕೊರೋನಾ ಸಂಕಷ್ಟಕ್ಕೆ ನೆರವಾಗಲು ಬಯಸುವವರು ಹಾಗೂ ಇತರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನೆರವು ನೀಡಲು ಬಯಸುವ ದಾನಿಗಳು ಆಕಾಂಕ್ಷಾ ಪೋರ್ಟಲ್ ಮೂಲಕ ನೆರವು ನೀಡಬಹುದಾಗಿದೆ ಎಂದು ತಿಳಿಸಿದರು.

ನೀತಿ ಆಯೋಗದ ಸಿಇಓ ಅಮಿತಾಬ್ ಕಾಂತ್ ಅವರು ಮಾತನಾಡಿ, ಕರ್ನಾಟಕ ವಿವಿಧ ವಲಯಗಳಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಕರ್ನಾಟಕವು ಪ್ರಾರಂಭಿಸಿರುವ ಆಕಾಂಕ್ಷಾ ಪೋರ್ಟಲ್, ಸಿಎಸ್ಆರ್ ನಿಧಿ ಅಗತ್ಯವಿರುವ ಜಿಲ್ಲೆಗಳ ಅಭಿವೃದ್ಧಿಗೆ ಬಳಕೆಯಾಗಲು ನೆರವಾಗಲಿದೆ. ಆ ಮೂಲಕ ರಾಜ್ಯದ ಎಲ್ಲ ಭಾಗಗಳ ಸಮಾನ ಅಭಿವೃದ್ಧಿಗೆ ಸಾಧನವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT