ಪೊಲೀಸರಿಗೆ ರೇನ್ ಕೋಟ್ ವಿತರಿಸುತ್ತಿರುವ ಸಚಿವ ಬೊಮ್ಮಾಯಿ 
ರಾಜ್ಯ

ರಾಜ್ಯದ ಎಲ್ಲಾ ಸಂಚಾರಿ ಪೊಲೀಸರಿಗೆ ರೈನ್ ಕೋಟ್: ಸಚಿವ ಬೊಮ್ಮಾಯಿ

ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸಂಚಾರ ವಿಭಾಗದ ಪೊಲೀಸರಿಗೆ ಸರ್ಕಾರದ ವತಿಯಿಂದಲೇ ರೈನ್ ಕೋಟ್ ವಿತರಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸಂಚಾರ ವಿಭಾಗದ ಪೊಲೀಸರಿಗೆ ಸರ್ಕಾರದ ವತಿಯಿಂದಲೇ ರೈನ್ ಕೋಟ್ ವಿತರಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಬೆಂಗಳೂರು ಮೆಟ್ರೋ ರೈಲು ನಿಗಮ, ಎಂಬೆಸ್ಸಿ ಮತ್ತು ಆಕ್ಸ್ ಇಂಟರ್ ನೆಟ್ ಕಂಪನಿ ಸಹಯೋಗದಲ್ಲಿ ಬುಧವಾರ ನಗರದ ಪುರಭವನದ ಬಳಿ ಬೆಂಗಳೂರು ಸಂಚಾರ ಪೊಲೀಸ್ ವಿಭಾಗ ಬುಧವಾರ ಆಯೋಜಿಸಿದ್ದ ಪೊಲೀಸರಿಗೆ ರೈನ್ ಕೋಟ್ ಹಾಗೂ ಫೇಸ್ ಶೀಲ್ಡ್ ಸಾಂಕೇತಿಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಳೆ, ಗಾಳಿ, ಹಾಗೂ ಚಳಿ ಎನ್ನದೆ ಕರ್ತವ್ಯ ನಿರ್ವಹಿಸುವ ಪೊಲೀಸರ ಸಂಕಷ್ಟ ತಿಳಿದಿದೆ. ಹೀಗಾಗಿ ಮಳೆಯಲ್ಲಿ ರಕ್ಷಣೆಗೆ ಪೊಲೀಸರಿಗೆ ಉಡುಪು ವಿತರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ. 

ನಗರದಲ್ಲಿ ಸಂಚಾರ ದಟ್ಟಣೆ ತಗ್ಗಿಸುವ ಸಲುವಾಗಿ ನಡೆದಿರುವ 12 ಹೈಸ್ಪೀಡ್ ಕಾರಿಡಾರ್ ಗಳ ನಿರ್ಮಾಣ ಕಾಮಗಾರಿ ಎಂಟು ತಿಂಗಳಲ್ಲಿ ಮುಗಿಯಲಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಗಳ ಮೂಲಕ ನಗರ ಪ್ರವೇಶಿಸುವ ವಾಹನಗಳಿಂದ ಉಂಟಾಗುವ ದಟ್ಟಣೆ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ. 

ನಗರದ ಪೊಲೀಸ್ ಠಾಣೆಗಳ ಆಧುನೀಕರ ಕೆಲಸವು ಆಯುಕ್ತ ಕಮಲ್ ಪಂತ್ ನೇತೃತ್ವದಲ್ಲಿ ಸಾಗೋಂಪಾಗಿ ಸಾಗಿದೆ. ನಗರದ ಪೊಲೀಸ್ ವ್ಯವಸ್ಥೆಯ ಪುನಾರಚನೆಗೆ ಕೂಡ ನಿರ್ಧರಿಸಲಾಗಿದೆ. 

ಕೊರೋನಾ ಸಂಕಷ್ಟದ ಕಾಲದಲ್ಲೂ ಕೂಡ ಎದೆಗುಂದದೆ ಹಗಲಿರುಳು ಕಾರ್ಯ ನಿರ್ವಹಿಸುತ್ತಿರುವ ಸಂಚಾರ ವಿಭಾಗದ ಪೊಲೀಸರಿಗೆ ಎಂಬೆಸ್ಸಿ ಕಂಪನಿ ರೂ.15 ಲಕ್ಷ ವೆಚ್ಚದಲ್ಲಿ 4500 ಫೇಸ್ ಶೀಲ್ಡ್, 8 ಸಾವಿರ ಹ್ಯಾಂಡ್ ಗ್ಲೌಸ್ ಗಳನ್ನು ಸಿಎಸ್ಆರ್ ನಿಧಿಯಲ್ಲಿ ನೀಡಿದೆ. ಆಕ್ಟ್ ಇಂಟರ್ ನೆಟ್ ಕಂಪನಿ ರೂ.57 ಲಕ್ಷ ವೆಚ್ಚದಲ್ಲಿ 4750 ರೈನ್ ಕೋಟ್ ಗಳು ಹಾಗೂ ಬಿಎಂಆರ್'ಸಿಎಲ್ ವತಿಯಿಂದ ರೂ.88 ಲಕ್ಷ ಮೊತ್ತ ಮೇರಿಯಲ್ ಮೆಸೇಜಿಂಗ್ ಸಿಸ್ಟಂಗಳನ್ನು ಕೊಡುಗೆಯಾಗಿ ನೀಡಿವೆ. ಈ ಕಂಪನಿಗಳ ಸಾಮಾಜಿಕ ಕಾರ್ಯಕ್ರಮವನ್ನು ಅಭಿನಂದಿಸುತ್ತೇನೆಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT