ಅಶ್ವತ್ಥ್ ನಾರಾಯಣ್ 
ರಾಜ್ಯ

ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದ ಕೋವಿಡ್ ಪರಿಸ್ಥಿತಿ ವಿವರಿಸಿದ ಡಿಸಿಎಂ ಅಶ್ವತ್ಥ್ ನಾರಾಯಣ್, ಕಾರಜೋಳ

ರಾಜ್ಯದ ಕೋವಿಡ್‌ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.

ಬೆಂಗಳೂರು: ರಾಜ್ಯದ ಕೋವಿಡ್‌ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.

ಡಿಸಿಎಂ  ಗೋವಿಂದ ಕಾರಜೋಳ ಅವರೊಂದಿಗೆ ರಾಜಭವನಕ್ಕೆ ತೆರಳಿದ  ಡಾ.ಅಶ್ವತ್ಥನಾರಾಯಣ, ಈವರೆಗೂ ಸೋಂಕು ತಡೆಗಟ್ಟಲು ಲಾಕ್‌ಡೌನ್‌, ಲಸಿಕೆ ಅಭಿಯಾನ, ವೈದ್ಯಕೀಯ ಮೂಲಸೌಕರ್ಯ ಅಭಿವೃದ್ಧಿ, ಸಿಬ್ಬಂದಿ ನೇಮಕ ಸೇರಿದಂತೆ ಸರಕಾರ ಕೈಗೊಂಡಿರುವ ಎಲ್ಲ ಕ್ರಮಗಳ ಬಗ್ಗೆ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಸಮಗ್ರ  ಮಾಹಿತಿ ನೀಡಿದರು.

ಲಾಕ್ಡೌನ್‌ ನಂತರ ರಾಜ್ಯದಲ್ಲಿ ಸೋಂಕಿನ ಪಾಸಿಟಿವಿಟಿ ದರವೂ ಕಡಿಮೆಯಾಗಿ ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ಇದರ ಜತೆಯಲ್ಲೇ 45 ವರ್ಷ ಮೀರಿದ ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿಗೆ ಲಸಿಕೆ ನೀಡವ ಕೆಲಸ ನಡೆಯುತ್ತಿದೆ. ಇಡೀ ರಾಜ್ಯಾದ್ಯಂತ ಆಮ್ಲಜನಕ, ಔಷಧಿ, ರೆಮಿಡಿಸಿವಿರ್‌ ಕೊರತೆಯನ್ನು ನೀಗಿಸಲಾಗಿದೆ ಎಂದು ಅಂಕಿ- ಅಂಶಗಳ ಸಹಿತ ರಾಜ್ಯಪಾಲರಿಗೆ ವಿವರಣೆ ಸಲ್ಲಿಸಿದರು.

ಬ್ಲ್ಯಾಕ್‌ ಫಂಗಸ್‌ ಬಗ್ಗೆಯೂ ರಾಜ್ಯಪಾಲರಿಗೆ ಮಾಹಿತಿ ನೀಡಿದ ಡಿಸಿಎಂ ಅವರು, ಈ ಕಾಯಿಲೆಗೆ ಸಂಬಂಧಿಸಿದ ಔಷಧಿಗಳ ಕೊರತೆ ನಿವಾರಣೆಗೆ ಎಲ್ಲ ಪ್ರಯತ್ನ ನಡೆದಿದೆ. ನಿರಂತರವಾಗಿ ಕೇಂದ್ರ ಸರಕಾರದ ಜತೆ ಸಂಪರ್ಕದಲ್ಲಿದ್ದು, ಇಡೀ ಸರಕಾರ ಒಂದು ತಂಡದ ರೂಪದಲ್ಲಿ ಕೆಲಸ ಮಾಡುತ್ತಿದೆ ಎಂದು ರಾಜ್ಯಪಾಲರಿಗೆ ತಿಳಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT