ಮಡಿಕೇರಿ ಕ್ಯಾಂಟೀನ್ ಹೊರಗಿನ ಜನದಟ್ಟಣೆ 
ರಾಜ್ಯ

ಮಡಿಕೇರಿ: ತಿಂಗಳ ಅವಶ್ಯಕ ವಸ್ತುಗಳಿಗಾಗಿ ಉದ್ದನೆಯ ಸರತಿ ಸಾಲಿನಲ್ಲಿ ನಿಂತ ಮಾಜಿ ಸೇನಾ ಯೋಧರು!

ತಮ್ಮ ಮಾಸಿಕ ಕೋಟಾದ ಅವಶ್ಯಕ ವಸ್ತುಗಳನ್ನು ಪಡೆಯಲು ಮಡಿಕೇರಿ ಮತ್ತು ವಿರಾಜಪೇಟೆಯ ಸೇನಾ ಕ್ಯಾಂಟೀನ್ ಆವರಣದಲ್ಲಿ ನೂರಾರು ಮಾಜಿ ಸೈನಿಕರು ನೆರೆದಿದ್ದರು.

ಮಡಿಕೇರಿ: ತಮ್ಮ ಮಾಸಿಕ ಕೋಟಾದ ಅವಶ್ಯಕ ವಸ್ತುಗಳನ್ನು ಪಡೆಯಲು ಮಡಿಕೇರಿ ಮತ್ತು ವಿರಾಜಪೇಟೆಯ ಸೇನಾ ಕ್ಯಾಂಟೀನ್ ಆವರಣದಲ್ಲಿ ನೂರಾರು ಮಾಜಿ ಸೈನಿಕರು ನೆರೆದಿದ್ದರು. ಕ್ಯಾಂಟೀನ್ ಆವರಣದಿಂದ ಸುಮಾರು 1 ಕಿ.ಮೀ. ದೂರದವರೆಗೂ ಸಾಲುಗಟ್ಟಿ ನಿಂತಿದ್ದರು. ಜನದಟ್ಟಣೆಯಿಂದಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಮಡಿಕೇರಿಯ ಸುಮಾರು 300 ನಿವಾಸಿಗಳನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ.

ಮಡಿಕೇರಿ ಮತ್ತು ವಿರಾಜಪೇಟೆಯ ಸೇನಾ ಕ್ಯಾಂಟೀನ್ ನಲ್ಲಿ ಸುಮಾರು 4500 ಮಂದಿ ಕಾರ್ಡ್ ಹೊಂದಿರುವವರು ಇದ್ದಾರೆ. ಲಿಕ್ಕರ್ ಸೇರಿದಂತೆ ಪ್ರತಿಯೊಂದು ವಸ್ತುವನ್ನು ತಿಂಗಳ ಕೋಟಾದಲ್ಲಿ ಪಡೆಯಲು ಅವರು ಅರ್ಹರಾಗಿದ್ದಾರೆ. ಆದಾಗ್ಯೂ, ಕನಿಷ್ಟ ಸರಬರಾಜಿನಿಂದಾಗಿ ಪ್ರತಿ ತಿಂಗಳು ಕೋಟಾ ಪಡೆಯಲು ಆಗುತ್ತಿಲ್ಲ. ಅದನ್ನು ಮುಂದಿನ ಸರಬರಾಜಿಗೂ ವರ್ಗಾಯಿಸುವಂತಿಲ್ಲ.

ಏಪ್ರಿಲ್ ನಿಂದ ಮಡಿಕೇರಿ ಮತ್ತು ವಿರಾಜ್ ಪೇಟೆ ಕ್ಯಾಂಟೀನ್ ಮುಚ್ಚಿದ ನಂತರ ಶುಕ್ರವಾರ ಮಾತ್ರ ತೆರೆಯಲಾಗಿತ್ತು. ಲಾಕ್ ಡೌನ್ ವಿನಾಯಿತಿ ಅವಧಿಯಲ್ಲಿ ಬೆಳಗ್ಗೆ 6 ರಿಂದ 10 ಗಂಟೆಯವರೆಗೂ ತಮ್ಮ ಅವಶ್ಯಕ ವಸ್ತುಗಳನ್ನು ಪಡೆಯಲು ಕಾರ್ಡ್ ದಾರರು
ಮುಗಿ ಬಿದ್ದರು.

ಬೆಳಗ್ಗೆ 3 ಗಂಟೆಯಿಂದ ಕ್ಯಾಂಟೀನ್ ಹೊರಗಡೆ ಕಾಯುತ್ತಿದ್ದೇನೆ. ಬೆಳಗ್ಗೆ 10 ಗಂಟೆಯವರೆಗೂ ಮಾತ್ರ ಕ್ಯಾಂಟೀನ್ ತೆರೆದಿರುತ್ತದೆ. ಮೇ ತಿಂಗಳ ಕೋಟಾ ಪಡೆಯಲು ಸೋಮವಾರ ಕೊನೆಯ ದಿನ. ಕ್ಯಾಂಟೀನ್ ಕನಿಷ್ಠ ದಿನಗಳ ವರೆಗೂ ಖರೀದಿ ಅವಕಾಶವನ್ನು ವಿಸ್ತರಿಸಬೇಕು ಎಂದು ಕ್ಯೂನಲ್ಲಿ ನಿಂತಿದ್ದ ಗ್ರಾಹಕರೊಬ್ಬರು ಹೇಳಿದರು.

ಈ ಮಧ್ಯೆ ಕ್ಯಾಂಟೀನ್ ಹೊರಗಡೆಯ ದಟ್ಟಣೆಗೆ ಸಂಬಂಧಿಸಿದಂತೆ ಗೋಲ್ಡನ್ ಪಾಮ್ ಕ್ಯಾಂಟೀನ್ ಹಿರಿಯ ಮ್ಯಾನೇಜರ್ ಗೆ ಪತ್ರವೊಂದನ್ನು ಕಳುಹಿಸಲಾಗಿದೆ. ನಿವೃತ್ತ. ಕರ್ನಲ್ ರಾಮನ್, ಮೇ ಸರಬರಾಜುಗಾಗಿ ಕ್ಯಾಂಟೀನ್ ತೆರೆಯುವಲ್ಲಿನ ವಿಳಂಬವನ್ನು ಖಂಡಿಸಿ ಮತ್ತು ಜನದಟ್ಟಣೆಯ ಕಾರಣವನ್ನು ಪ್ರಶ್ನಿಸಿದ್ದಾರೆ.

ನಿವೃತ್ತ ಯೋಧ ರಾಮನ್, ಮೇ ತಿಂಗಳ ವಸ್ತುಗಳಿಗಾಗಿ ಕ್ಯಾಂಟೀನ್ ತೆರೆಯುವಿಕೆಯಲ್ಲಿ ವಿಳಂಬವನ್ನು ಖಂಡಿಸಿದ್ದಾರೆ. ಜನದಟ್ಟಣೆಯನ್ನು ಪ್ರಶ್ನಿಸಿದ್ದಾರೆ. ಈ ಪತ್ರವನ್ನು ಟಿ ಶೆಟ್ಟಿಗೆರಿ ಮಾಜಿ ಸೈನಿಕರ ಅಸೋಸಿಯೇಷನ್ ಕಾನೂನು ಸಲಹೆಗಾರ ಎಂ.ಎನ್. ಸುಬ್ರಮಣಿ ವರ್ಗಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ, ಶೀಘ್ರದಲ್ಲೇ ರಾಜೀನಾಮೆ; ರಾಜ್ಯಪಾಲ ಗೆಹ್ಲೋಟ್ ಇಂದೇ ಬೆಂಗಳೂರಿಗೆ ವಾಪಸ್

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT