ವಿಡಿಯೊದಲ್ಲಿದ್ದ ಪೊಲೀಸರು ಮತ್ತು ಗ್ರಾಹಕರು 
ರಾಜ್ಯ

ಮಡಿಕೇರಿ ಆರ್ಮಿ ಕ್ಯಾಂಟೀನ್ ಹೊರಗೆ ಗ್ರಾಹಕರ ಸಾಲು: ವರದಿ ಮಾಡಲು ತೆರಳಿದ್ದ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಗಾರ್ತಿ ಮೇಲೆ ಹಲ್ಲೆ ಆರೋಪ

ಮಡಿಕೇರಿಯ ಆರ್ಮಿ ಕ್ಯಾಂಟೀನ್ ಎದುರು ಸಾಮಾನುಗಳ ಖರೀದಿಗೆ ಗ್ರಾಹಕರ ಉದ್ದದ ಸಾಲನ್ನು ಕಂಡು ಅದನ್ನು ವರದಿ ಮಾಡಲು ಸ್ಥಳಕ್ಕೆ ತೆರಳಿದ್ದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ವರದಿಗಾರ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಶುಕ್ರವಾರ ನಡೆದಿದೆ.

ಮಡಿಕೇರಿ(ಕೊಡಗು ಜಿಲ್ಲೆ): ಮಡಿಕೇರಿಯ ಆರ್ಮಿ ಕ್ಯಾಂಟೀನ್ ಎದುರು ಸಾಮಾನುಗಳ ಖರೀದಿಗೆ ಗ್ರಾಹಕರ ಉದ್ದದ ಸಾಲನ್ನು ಕಂಡು ಅದನ್ನು ವರದಿ ಮಾಡಲು ಸ್ಥಳಕ್ಕೆ ತೆರಳಿದ್ದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ವರದಿಗಾರ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಶುಕ್ರವಾರ ನಡೆದಿದೆ.

ಮಡಿಕೇರಿ ಆರ್ಮಿ ಕ್ಯಾಂಟೀನ್ ಬಳಿ ಗ್ರಾಹಕರು ಕೊರೋನಾ ಲಾಕ್ ಡೌನ್ ಸಮಯದಲ್ಲಿ ಉದ್ದವಾದ ಸರದಿ ಸಾಲಿನಲ್ಲಿ ಸಾಮಾಜಿಕ ಅಂತರವಿಲ್ಲದೆ ನಿಂತಿದ್ದರು. ಅದರ ಫೋಟೋ, ವಿಡಿಯೊ ತೆಗೆಯಲು ಹೋದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಗಾರ್ತಿ ಪ್ರಜ್ಞಾ ಜಿ ಆರ್ ಮತ್ತು ಇನ್ನೊಂದು ಪತ್ರಿಕೆಯ ವರದಿಗಾರನ ಮೇಲೆ ಪೊಲೀಸರು ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರು ನನ್ನನ್ನು ತಳ್ಳಿ ಮೊಬೈಲ್ ಫೋನ್ ಕಿತ್ತು ಬಿಸಾಕಿದರು. ಇದಕ್ಕೆ ಗ್ರಾಹಕರೊಬ್ಬರು ಸಾಥ್ ಕೊಟ್ಟು ಬೈಯತೊಡಗಿದರು ಎಂದು ನಮ್ಮ ಕೊಡಗು ಜಿಲ್ಲಾ ವರದಿಗಾರ್ತಿ ತಿಳಿಸಿದ್ದಾರೆ.

ವರದಿ ಮಾಡಲು ತೆರಳುವ ಪತ್ರಕರ್ತರ ಜೊತೆ ಪೊಲೀಸರು ಈ ರೀತಿ ವರ್ತಿಸುವುದು ಎಷ್ಟು ಸರಿ, ವರದಿಗಾರರ ಜೀವಕ್ಕೆ ಭದ್ರತೆ ಎಲ್ಲಿದೆ ಎಂಬ ಪ್ರಶ್ನೆ ಪತ್ರಕರ್ತ ಸಮೂಹದಲ್ಲಿ ಕೇಳಿಬರುತ್ತಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು: ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಇಂದು ಬೆಳಗ್ಗೆ ಇಬ್ಬರು ಪತ್ರಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಅವರಿಗೆ ದೂರು ಸಲ್ಲಿಸಿದೆ.

This is what my colleague @prajna_gr gets for reporting !

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT